ಜಂಬೂಸವಾರಿಗೆ ಸಿಎಂ ಚಾಲನೆ: ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು

ಅಕ್ಟೋಬರ್ 2, 2025 - 17:33
 0  10
ಜಂಬೂಸವಾರಿಗೆ ಸಿಎಂ ಚಾಲನೆ: ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು

ಮೈಸೂರು:  ಜಗತ್ ಪ್ರಸಿದ್ಧ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಸಂಜೆ 4.42ರಿಂದ 5.06 ನಡುವಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಾಮುಂಡೇಶ್ವರಿ ಮೂರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಸಲ್ಲಿಸಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಸಿಎಂ ಜೊತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು 6ನೇ ಬಾರಿ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.

 ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಆನೆಗಳು ಅಭಿಮನ್ಯುವಿಗೆ ಸಾಥ್ನೀಡುತ್ತಿವೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow