ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಸೆಪ್ಟೆಂಬರ್ 19, 2024 - 18:00
 0  10
ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

 

ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ಗುತ್ತಿಗೆದಾರನೊಬ್ಬನಿಗೆ ಬೈದು, ದಲಿತರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಲಭ್ಯವಾಗಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು,

ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್​​ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಜಾಮೀನು ಸಿಕ್ಕಿದರೂ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ದರು. ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow