ಜೈಲಿನಲ್ಲಿ ಇರುವಾಗಲೇ ನಟ ದರ್ಶನ್ ಮೇಲೆ ಮೂರು ಹೊಸ ಎಫ್ಐಆರ್ ದಾಖಲು

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್ ಮೇಲೆ ಮೂರು ಹೊಸ ಎಫ್ಐಆರ್ ದಾಖಲು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ಮೊಬೈಲ್ ಮುಂತಾದ್ದನ್ನು ನೀಡಲಾಗಿದೆ. ಇದರಿಂದ ಜೈಲಿನ ನಿಯಮಗಳು ಉಲ್ಲಂಘನೆ ಆಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಎಲ್ಲದರಲ್ಲಿಯೂ ದರ್ಶನ್ ಆರೋಪಿ ಆಗಿದ್ದಾರೆ.
ಸ್ಯಾಂಡಲ್ವುಡ್ ನಟ ದರ್ಶನ್ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಈ ಮೂರೂ ಎಫ್ಐಆರ್ಗಳಲ್ಲಿ ದರ್ಶನ್ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.
ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್ಐಆರ್ ಆಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






