ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿ!

ಡಿಸೆಂಬರ್ 21, 2024 - 10:52
 0  9
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿ!

ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಕರ್ನಾಟಕದ ಅನುಭವಿ ಬ್ಯಾಟ್ಸ್​ಮನ್ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಹೌದು ಉದ್ಯೋಗಿಗಳಿಗೆ ಸರ್ಕಾರಕ್ಕೆ ವಂಚನೆ ಎಸಗಿದ ಆರೋಪದಲ್ಲಿ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ.

ಪಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದೇ ತಿಂಗಳು ನಾಲ್ಕರಂದು ಅರೆಸ್ಟ್‌ ವಾರೆಂಟ್ ಜಾರಿಯಾಗಿದ್ದು ರಾಬಿನ್‌ ಉತ್ತಪ್ಪ ಪುಲಕೇಶಿ ನಗರದ ನಿವಾಸಿಯಾಗಿರುವ ಕಾರಣ ಅಲ್ಲಿನ ಠಾಣೆಗೆ ಪತ್ರ ಬರೆಯಲಾಗಿದೆ. 

ಏನಿದು ಆರೋಪ?
ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸಿಲ್ಲ.
ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿಕೊಂಡು ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ಪಿಎಫ್ ಹಣ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow