ಟೀಮ್ ಇಂಡಿಯಾಗೆ ಯುವ ಡೆಡ್ಲಿ ಆಲ್ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯ ಫುಲ್ ಶೇಕ್!

ಟೀಮ್ ಇಂಡಿಯಾ ಟಿ20 ಸರಣಿಗಾಗಿ ಸೌತ್ ಆಫ್ರಿಕಾ ಪ್ರವಾಸ ಕೈಗೊಂಡಿದೆ. ಭಾರತ ಟಿ20 ತಂಡದ ಕ್ಯಾಪ್ಟನ್ ಸೂರ್ಯಕುಮಾರ್ ನೇತೃತ್ವದಲ್ಲಿ ತಂಡ ಕಣಕ್ಕಿಳಿಯುತ್ತಿದೆ.
ನವೆಂಬರ್ 8ನೇ ತಾರೀಕಿನಿಂದ ಟೀಮ್ ಇಂಡಿಯಾ, ಸೌತ್ ಆಫ್ರಿಕಾ ಮಧ್ಯೆ 4 ಟಿ20 ಪಂದ್ಯಗಳ ಸರಣಿ ಶುರುವಾಗಲಿದೆ. ಟಿ20 ವಿಶ್ವಕಪ್ ಚಾಂಪಿಯನ್ ಭಾರತ ತಂಡದ ವಿರುದ್ಧ ಗೆಲ್ಲಲೇಬೇಕು ಎಂದು ಸೌತ್ ಆಫ್ರಿಕಾ ಭಾರೀ ತಯಾರಿ ನಡೆಸಿಕೊಂಡಿದೆ. ಸೌತ್ ಆಫ್ರಿಕಾ ವಿರುದ್ಧ ಸರಣಿಗೆ ಟೀಮ್ ಇಂಡಿಯಾದಲ್ಲಿ ಬಹುತೇಕ ಯುವಕರಿಗೆ ಮಣೆ ಹಾಕಲಾಗಿದೆ. ಟೀಮ್ ಇಂಡಿಯಾಗೆ ಡೆಡ್ಲಿ ಯುವ ಆಲ್ರೌಂಡರ್ ಸ್ಥಾನ ಪಡೆದುಕೊಂಡಿದ್ದು, ಇದು ಹಾರ್ದಿಕ್ ಪಾಂಡ್ಯಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇತ್ತೇಚೆಗೆ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡದ ಪರ ಅಮೋಘ ಪ್ರದರ್ಶನ ನೀಡಿದವ್ರು ರಮಣದೀಪ್ ಸಿಂಗ್. ಇವರು ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾದ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಏಷ್ಯಾಕಪ್ನಲ್ಲಿ ಲೀಗ್ ಹಂತದಲ್ಲಿ ಗೆದ್ದು ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಪ್ರಮುಖ ಕಾರಣ ರಮಣದೀಪ್ ಸಿಂಗ್. ರಮಣದೀಪ್ ಸಿಂಗ್ ಆಲ್ರೌಂಡರ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ರು.
ಅಫ್ಘಾನ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎ ಕ್ಯಾಪ್ಟನ್ ತಿಲಕ್ ವರ್ಮಾ ಮತ್ತು ಅಭಿಷೇಕ್ ಶರ್ಮಾ ಅವರ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ಕ್ರೀಸ್ಗೆ ಬಂದ ರಮಣದೀಪ್ ಅಫ್ಘಾನ್ ತಂಡದ ಬೌಲರ್ಗಳ ಬೆಂಡೆತ್ತಿದ್ರು. ಇನ್ನಿಂಗ್ಸ್ ಉದ್ಧಕ್ಕೂ ಭರ್ಜರಿ ಬ್ಯಾಟಿಂಗ್ ಮಾಡಿದ ಯುವ ಆಲ್ರೌಂಡರ್ 64 ರನ್ ಚಚ್ಚಿದ್ರು. ಆದ್ರೂ, ಅಫ್ಘಾನ್ ವಿರುದ್ಧ ಭಾರತ ಸೋತಿತ್ತು.
ಭಾರತ ತಂಡಕ್ಕೆ ರಮಣದೀಪ್ ಸಿಂಗ್ ಎಂಟ್ರಿ ಆಗಿದೆ. ಇವ್ರ ಎಂಟ್ರಿ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಕುತ್ತು ತಂದಿದೆ. ಹಾರ್ದಿಕ್ ಪಾಂಡ್ಯ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಗೆ ಹೋದಲ್ಲಿ ರಮಣದೀಪ್ ಸಿಂಗ್ ಅದೃಷ್ಟ ಖುಲಾಯಿಸಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






