ಟೆಸ್ಟ್ ತಂಡದಲ್ಲಿ ಸ್ಥಾನ ಬೇಕೆಂದ್ರೆ ದೇಶೀಯ ಟೂರ್ನಿ ಆಡಲೇಬೇಕು: ಗೌತಮ್ ಗಂಭೀರ್ ಸೂಚನೆ

2024 ರಲ್ಲಿ ವರ್ಲ್ಡ್ ಕಪ್ ಗೆದ್ದ ಬಳಿಕ ಟೀಮ್ ಇಂಡಿಯಾ ಗ್ರಹಗತಿ ಕೆಟ್ಟಂತೆ ಕಾಣುತ್ತಿದೆ. ರಾಹುಲ್ ಅವರು ಮುಖ್ಯ ಕೋಚ್ ಹುದ್ದೆಯಿಂದ ಇಳಿದ ಬಳಿಕ ಗೌತಮ್ ಗಂಭೀರ್ ಅವರಿಗೆ ಮುಖ್ಯ ಕೋಚ್ ನೀಡಲಾಗಿತ್ತು. ಆದರೆ ಗೌತಮ್ ಮುಖ್ಯ ಕೋಚ್ ಅಲಂಕರಿಸಿದ ಬಳಿಕ ಯಾಕೋ ತಂಡದ ಗ್ರಹಗತಿ ಕೆಟ್ಟು ಹೋಗಿದೆ.
ಹೀಗಾಗಿ ಮುಂದಿನ ತಿಂಗಳು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ನಂತರ ಗೌತಮ್ ಗಂಭೀರ್ ಅವರನ್ನು ಮುಖ್ಯ ಕೋಚ್ ಹುದ್ದೆಯಿಂದ ತೆಗೆದುಹಾಕಬಹುದು. ಗೌತಮ್ ಗಂಭೀರ್ ಬದಲಿಗೆ ವಿವಿಎಸ್ ಲಕ್ಷ್ಮಣ್ ತಂಡದ ಜವಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರ ಬೆನ್ನಲ್ಲೇ ಎಲ್ಲರೂ ದೇಶೀಯ ಕ್ರಿಕೆಟ್ನಲ್ಲಿ ಆಡಬೇಕೆಂದು ನಾನು ಯಾವಾಗಲೂ ಬಯಸುತ್ತೇನೆ. ನೀವು ರೆಡ್ ಬಾಲ್ ಕ್ರಿಕೆಟ್ನಲ್ಲಿ ಆಡುವ ಬದ್ದತೆ ಹೊಂದಿದ್ದರೆ, ದೇಶೀಯ ಕ್ರಿಕೆಟ್ ಆಡುತ್ತೀರಿ. ಹೀಗಾಗಿ ಯಾರೆಲ್ಲಾ ಫ್ರೀ ಇರುತ್ತಾರೊ ಅವರು ದೇಶೀಯ ಅಂಗಳದಲ್ಲಿ ರೆಡ್ ಬಾಲ್ ಕ್ರಿಕೆಟ್ ಆಡಬೇಕೆಂದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
ಪ್ರಸ್ತುತ ತಂಡದಲ್ಲಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಟೂರ್ನಿ ಆಡಿ ವರ್ಷಗಳೇ ಕಳೆದಿವೆ. ಅದರಲ್ಲೂ ಭಾರತೀಯ ಅಂಗಳದ ರೆಡ್ ಬಾಲ್ ಕ್ರಿಕೆಟ್ ಆಗಿರುವ ರಣಜಿ ಟೂರ್ನಿಯಲ್ಲಿ ಈ ಇಬ್ಬರು ಕಾಣಿಸಿಕೊಳ್ಳುತ್ತಿಲ್ಲ.
ಇತ್ತ ಕಳಪೆ ಫಾರ್ಮ್ನಲ್ಲಿದ್ದರೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ರಣಜಿ ಟೂರ್ನಿ ಆಡದಿರುವ ಬಗ್ಗೆ ಹಲವು ಮಾಜಿ ಆಟಗಾರರು ಪ್ರಶ್ನೆಗಳೆನ್ನೆತ್ತಿದ್ದಾರೆ. ಇದೀಗ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ದೇಶೀಯ ಟೂರ್ನಿ ಆಡಲೇಬೇಕೆಂದು ಸೂಚಿಸಿದ್ದಾರೆ.
ಈ ಮೂಲಕ ಕಳೆದ ಕೆಲ ವರ್ಷಗಳಿಂದ ದೇಶೀಯ ಟೂರ್ನಿ ಆಡದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಗೌತಮ್ ಗಂಭೀರ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಈ ಸಂದೇಶದೊಂದಿಗೆ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳದ ಆಟಗಾರರನ್ನು ಟೆಸ್ಟ್ ತಂಡಕ್ಕೆ ಪರಿಗಣಿಸುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






