ಡಿಕೆಶಿ ಮುಖ್ಯಮಂತ್ರಿಯಾಗಲು ಕಾಲ ಕೂಡಿಬರಬೇಕು, ಅವರು ಸಿಎಂ ಆಗುವಾಸೆ ನನಗಿದೆ: ಡಿಕೆ ಸುರೇಶ್

ಮಾರ್ಚ್ 1, 2025 - 16:00
 0  10
ಡಿಕೆಶಿ ಮುಖ್ಯಮಂತ್ರಿಯಾಗಲು ಕಾಲ ಕೂಡಿಬರಬೇಕು, ಅವರು ಸಿಎಂ ಆಗುವಾಸೆ ನನಗಿದೆ: ಡಿಕೆ ಸುರೇಶ್

ಬೆಂಗಳೂರು: ಡಿಕೆಶಿ ಮುಖ್ಯಮಂತ್ರಿಯಾಗಲು ಕಾಲ ಕೂಡಿಬರಬೇಕು, ಅವರು ಸಿಎಂ ಆಗುವಾಸೆ ನನಗಿದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲ್ಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ. 

ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದು ನುಡಿದ್ದಾರೆ.

ಸದ್ಯಕ್ಕಂತೂ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ, ಶಿವಕುಮಾರ್ ಪಕ್ಷವನ್ನು ನಂಬಿದ್ದಾರೆ, ಒಬ್ಬ ಸಹೋದರನ್ನನಾಗಿ ತನಗೂ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂಬ ಮನಸ್ಸಿದೆ, ಅವರು ಪಕ್ಷವನ್ನು ನಂಬಿದ್ದಾರೆ, ಎಲ್ಲಾದಕ್ಕೂ ಕಾಲ ಕೂಡಿ ಬರಬೇಕು ಎಂದು ಸುರೇಶ್ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow