ತಪ್ಪಾಗಿದ್ದರೆ ಕ್ಷಮೆ, ತಪ್ಪೇ ಇಲ್ಲದಿದ್ದರೇ ಕ್ಷಮೆ ಕೇಳಲ್ಲ: ಮತ್ತೊಮ್ಮೆ ನಿರಾಕರಿಸಿದ ನಟ ಕಮಲ್ ಹಾಸನ್

ಮೇ 30, 2025 - 16:00
 0  10
ತಪ್ಪಾಗಿದ್ದರೆ ಕ್ಷಮೆ, ತಪ್ಪೇ ಇಲ್ಲದಿದ್ದರೇ ಕ್ಷಮೆ ಕೇಳಲ್ಲ: ಮತ್ತೊಮ್ಮೆ ನಿರಾಕರಿಸಿದ ನಟ ಕಮಲ್ ಹಾಸನ್

ತಮಿಳು ನಟ ಕಮಲ್ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆವಿವಾದಾತ್ಮಕ ಹೇಳಿಕೆ ಕೊಟ್ಟು ವಿವಾದಕ್ಕೆ ಗುರಿಯಾಗಿದ್ದಾರೆ. ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿದ ಅವರ ಹೇಳಿಕೆ ಬಗ್ಗೆ ಈಗ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಮಲ್ಹಾಸನ್ಅವರ ಹೊಸ ಚಿತ್ರ ಥಗ್ಲೈಫ್ಚಿತ್ರದ ಪ್ರೊಮೋಷನ್ಸ್ಗೆ ಚಿತ್ರತಂಡ ಕಾರ್ಯಕ್ರಮ ನಡೆಸಿತ್ತು. ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ಸಹ ಭಾಗಿಯಾಗಿದ್ರು. ಶಿವರಾಜ್ಕುಮಾರ್ಅವರ ಎದುರಲ್ಲೇ ಹೀಗೆ ನಾಲಿಗೆ ಹರಿಬಿಟ್ಟಿದ್ದಕ್ಕೆ ಭಾರಿ ಆಕ್ರೋಶಗಳು ಕೇಳಿ ಬಂದಿವೆ.

ಇದೀಗ ಚೆನ್ನೈನಲ್ಲಿ ಬಗ್ಗೆ ಮಾತನಾಡಿರುವ ನಟ ಕಮಲ್ ಹಾಸನ್, ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲಎಂದಿದ್ದಾರೆ. ‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆಎಂದು ಸ್ಪಷ್ಟಪಡಿಸಿದ್ದಾರೆ.

ಕಮಲ್ ಹಾಸನ್ ಸಿನಿಮಾಥಗ್ ಲೈಫ್ ಕರ್ನಾಟಕದ ವಿತರಣೆ ಹಕ್ಕನ್ನು ಖರೀದಿಸಿರುವ ವೆಂಕಟೇಶ್ ಅವರನ್ನು ನಿನ್ನೆ ಫಿಲಂ ಚೇಂಬರ್ಗೆ ಕರೆಸಿ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಬಳಿ ಕ್ಷಮೆ ಕೇಳಿಸುವ ಜವಾಬ್ದಾರಿಯನ್ನು ವೆಂಕಟೇಶ್ ಹೆಗಲಿಗೆ ಹಾಕಲಾಗಿತ್ತು. ವೆಂಕಟೇಶ್ ಸಹ, ತಾವು ಪರಿಸ್ಥಿತಿಯ ಗಂಭೀರತೆಯನ್ನು ಕಮಲ್ ಅವರಿಗೆ ಮನವರಿಕೆ ಮಾಡಿ ಅಗತ್ಯ ಹೆಜ್ಜೆ ಇಡುವಂತೆ ಮನವಿ ಮಾಡುತ್ತೇವೆ ಎಂದಿದ್ದರು. ಅದಾದ 24 ಗಂಟೆಯೊಳಗೆ ಕಮಲ್ ಹಾಸನ್, ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow