ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ: ಡಿಕೆ ಶಿವಕುಮಾರ್

ಹಾಸನ: ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಜನ ವಿಕಾಸ ಸಮಾವೇಶ ನಡಯಿತು. ಈ ವೇಳೆ ಮಾತನಾಡಿದ ಅವರು,
ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಹೇಳಿದರು.
ಇನ್ನೂ ನಾನು ಎಲ್ಲಿರ್ತೀನಿ, ಅಲ್ಲಿ ಪ್ರಾಮಾಣಿವಾಗಿಯೇ ಇರ್ತೀನಿ ಈ ಹಾಸನದ ಇತಿಹಾಸ ನೋಡಿದರೆ ನೋವಾಗುತ್ತೆ. ಹಲವು ರಾಜಕೀಯ ಕುಟುಂಬಗಳು ನೋವುಂಡಿವೆ. ಹಾಸನಾಂಬೆ ಆ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡಬೇಕು ಎಂದು ನುಡಿದರು.
ನಿಮ್ಮ ಹಾಸನದ ಮಾಜಿ ಸಂಸದರ ಸಾಕ್ಷಿಗುಡ್ಡೆ ಬಗ್ಗೆ ಮಾತನಾಡಲು ಅಸಹ್ಯವಾಗುತ್ತೆ. ವಿಜಯೇಂದ್ರ ಹಾಗೂ ಕುಮಾರಸ್ವಾಮಿಗೆ ಉಪಚುನಾವಣೆಯಲ್ಲಿ ಜನ ಉತ್ತರ ಕೊಟ್ಟಿದ್ದಾರೆ. ಇನ್ನು ಮುಂದೆ ಹಾಸನದ ಏಳು ವಿಧಾನಸಭೆ ಕ್ಷೇತ್ರ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






