ತಾಂಡವ್ ಮತ್ತು ನಿರ್ದೇಶಕ ಭರತ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು: ಕಮಿಷನರ್ ದಯಾನಂದ್

ನವೆಂಬರ್ 19, 2024 - 16:01
 0  9
ತಾಂಡವ್ ಮತ್ತು ನಿರ್ದೇಶಕ ಭರತ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು: ಕಮಿಷನರ್ ದಯಾನಂದ್

ಬೆಂಗಳೂರು: ನಟ ತಾಂಡವ ರಾಮ್​ ನಿರ್ದೇಶ ಭರತ್​ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ಚಂದ್ರಾ ಲೇಔಟ್​ನಲ್ಲಿ ನಡೆದಿದೆ. ಲೈಸನ್ಸ್ ಗನ್ ತೋರಿಸಿ ಬೆದರಿಕೆ ಹಾಕಿದ್ದಲ್ಲದೇ ಗುಂಡು ಕೂಡ ಹಾರಿಸಿದ ಘಟನೆ ನಡೆದಿದೆ. ಚಂದ್ರಾಲೇಔಟ್​ ಪೊಲೀಸರಿಂದ ಆರೋಪಿ ತಾಂಡವ ರಾಮ್​ರನ್ನ ಅರೆಸ್ಟ್ ಮಾಡಲಾಗಿದೆ. ಇನ್ನೂ ಈ ಘಟನೆ ಸಂಬಂಧ ಕಮಿಷನರ್ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಗೊತ್ತಿದ್ದೆ ಏರ್‌ಫೈರ್ ಮಾಡಿರೋದು ಗೊತ್ತಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. 

ನಿನ್ನೆ ಸಂಜೆ ಈ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ತಾಂಡವ್‌ರನ್ನು ಈಗಾಗಲೇ ಬಂಧಿಸಿದ್ದೇವೆ. ಕೃತ್ಯಕ್ಕೆ ಬಳಸಿದ ಗನ್ ಸೀಜ್ ಮಾಡಲಾಗಿದೆ. ಸಿನಿಮಾಗೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರದಲ್ಲಿ ತಾಂಡವ್ ಮತ್ತು ನಿರ್ದೇಶಕ ಭರತ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎಂಬುದು ಪ್ರಾರಂಭಿಕ ತನಿಖೆಯಲ್ಲಿ ತಿಳಿದು ಬಂದಿದೆ. ಗುಂಡು ಹಾರಿಸಬೇಕು ಎಂಬ ದೃಷ್ಟಿಕೋನದಲ್ಲಿ ಹೀಗೆ ಮಾಡಿದ್ದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow