ತಿರುಪತಿ ದೇಗುಲದ ಆಡಳಿತ ಮಂಡಳಿ ಹಿಂದೂಗಳ ಕೈಯಲ್ಲಿರಬೇಕು: ಶಾಸಕ ಯತ್ನಾಳ್

ಸೆಪ್ಟೆಂಬರ್ 21, 2024 - 15:50
 0  8
ತಿರುಪತಿ ದೇಗುಲದ ಆಡಳಿತ ಮಂಡಳಿ ಹಿಂದೂಗಳ ಕೈಯಲ್ಲಿರಬೇಕು: ಶಾಸಕ ಯತ್ನಾಳ್

ವಿಜಯಪುರ: ಸನಾತನ ಹಿಂದೂ ಧರ್ಮದವರ ಭಾವನೆ ಜೊತೆ ಆಟವಾಡಿ ಮೋಸ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಿರುಪತಿ ಸುತ್ತಮುತ್ತ ಚರ್ಚ್ ಮಾಡಿದ್ದಾರೆ. ತಿರುಪತಿ ದೇಗುಲದ ಆಡಳಿತ ಮಂಡಳಿ ಹಿಂದೂಗಳ ಕೈಯಲ್ಲಿರಬೇಕು.

ಇಡೀ ತಿರುಪತಿ ದೇವಸ್ಥಾನ ಶುದ್ಧಿಗೊಳಿಸಬೇಕು. ಸನಾತನ ಹಿಂದೂ ಧರ್ಮದವರ ಭಾವನೆ ಜೊತೆ ಆಟವಾಡಿ ಮೋಸ ಮಾಡಿದ್ದಾರೆ. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ಈ ಪ್ರಕರಣವನ್ನು ಇಲ್ಲಿಗೆ ಬಿಡಬಾರದು. ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕೆಂದು ಎಂದು ಮನವಿ ಮಾಡಿದರು.

ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವ ವಿಚಾರದ ಕುರಿತು ಕೇಂದ್ರ ಆರೋಗ್ಯ ಸಚಿವರು ವರದಿ ಕೇಳಿದ್ದಾರೆ. ಪ್ರಕರಣದಲ್ಲಿ ಯಾರು ತಪ್ಪಿತಸ್ಥರು ಇದ್ದಾರೆ ಅವರಿಗೆ ಗಲ್ಲು ಶಿಕ್ಷೆ ನೀಡಬೇಕು. ಇಲ್ಲವಾದರೆ ಹಿಂದೂ ಧರ್ಮದ ಮೇಲೆ ಏನೇ ಮಾಡಿದರು ನಡೆಯುತ್ತೆ ಎಂಬಂತಾಗುತ್ತದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲೆ ಟ್ಯಾಕ್ಸ್ ಹಾಕಿ ಆ ಹಣವನ್ನು ಕ್ರಿಶ್ಚನ್ ಹಾಗೂ ವಕ್ಫ್ ಅಸ್ತಿ ರಕ್ಷಣೆಗೆ ಉಪಯೋಗಿಸುತ್ತಾರೆ ಎಂದು ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow