ತಿರುಮತಿ ತಿಮ್ಮಪ್ಪನಿಗೆ ತಲೆ ಕೂದಲು ಅರ್ಪಿಸಿದ ಡಿಸಿಎಂ ಪವನ್ ಕಲ್ಯಾಣ್ ಪತ್ನಿ!

ಎಪ್ರಿಲ್ 14, 2025 - 18:04
 0  14
ತಿರುಮತಿ ತಿಮ್ಮಪ್ಪನಿಗೆ ತಲೆ ಕೂದಲು ಅರ್ಪಿಸಿದ ಡಿಸಿಎಂ ಪವನ್ ಕಲ್ಯಾಣ್ ಪತ್ನಿ!

ಡಿಸಿಎಂ ಪವನ್ ಕಲ್ಯಾಣ್ ಪತ್ನಿ ಅನ್ನಾ ಸೀದಾ ಅವರು, ತಿರುಮತಿ ತಿಮ್ಮಪ್ಪನಿಗೆ ತಲೆ ಕೂದಲು ಅರ್ಪಿಸಿದ್ದಾರೆ. ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ. ಆಂಧ್ರದಿಂದ​ ಸಿಂಗಾಪುರಕ್ಕೆ ಹೋಗಿದ್ದ ಪವನ್, ಇದೀಗ ಪತ್ನಿ ಅನ್ನಾ ಲೆಜ್ನೆವಾ ಮತ್ತು ಮಕ್ಕಳನ್ನ ಅಲ್ಲಿಂದ ಸುರಕ್ಷಿತವಾಗಿ ವಾಪಸ್ ಕರೆತಂದಿದ್ದಾರೆ. ಈ ಘಟನೆ ನಡೆದ ಬೆನ್ನಲ್ಲೇ ಪತ್ನಿ ಅನ್ನಾ ಸೀದಾ ತಿರುಪತಿಗೆ ಭೇಟಿ ನೀಡಿ ಮುಡಿ ಅರ್ಪಿಸಿದ್ದಾರೆ. 

ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪವನೋವಿಚ್‌ ಗಾಯಗೊಂಡಿದ್ದ. 8 ವರ್ಷ ವಯಸ್ಸಿನ ಮಾರ್ಕ್‌ ಶಂಕರ್‌ಗೆ ಅಲ್ಲಿಯೇ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಸಿಂಗಾಪುರಕ್ಕೆ ಹೋಗಿದ್ದ ಪವನ್​ ಕಲ್ಯಾಣ್​, ಪತ್ನಿ ಮತ್ತು ಮಕ್ಕಳನ್ನ ಹೈದರಾಬಾದ್‌ಗೆ ಕ್ಷೇಮವಾಗಿ ಕರೆತಂದಿದ್ದಾರೆ.

ಸಮ್ಮರ್ ಕ್ಯಾಂಪ್‌ಗೆಂದು ತೆರಳಿದ್ದ ಮಾರ್ಚ್ ಶಂಕರ್‌ಗೆ ಅಗ್ನಿ ದುರಂತದಲ್ಲಿ ಗಾಯಗಳಾಗಿತ್ತು. ಮಾರ್ಕ್ ಕೈ ಹಾಗೂ ಕಾಲುಗಳು ಸುಟ್ಟಿದ್ದವು. ಅಲ್ಲದೇ ಅತಿಯಾದ ಹೊಗೆಯನ್ನ ಸೇವಿಸಿದ್ದರು. ಈ ಬೆನ್ನಲ್ಲೇ ಪವನ್‌ ಕಲ್ಯಾಣ್ ಸಿಂಗಾರಪುರಕ್ಕೆ ತೆರಳಿದ್ದರು. ಅಲ್ಲೇ ಪುತ್ರನಿಗೆ ಅಗತ್ಯ ಚಿಕಿತ್ಸೆ ಕೊಡಿಸಿದ್ರು. ಪಕ್ಕವೇ ಇದ್ದು ಆರೈಕೆ ಮಾಡಿದ್ರು. ಇದೀಗ ಆಸ್ಪತ್ರೆಯಿಂದ ಮಗ ಡಿಸ್ಚಾರ್ಜ್​ ಆಗ್ತಿದ್ದಂತೆ ಸ್ವದೇಶಕ್ಕೆ ಮರಳಿದ್ದಾರೆ.

ಪುತ್ರ ಅಗ್ನಿ ಅವಘಡದಲ್ಲಿ ಸಿಲುಕಿ ಗಾಯಗೊಂಡಿದ್ದರಿಂದ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ತಿರುಪತಿ ತಿಮ್ಮಪ್ಪನ ಬಳಿ ಹರಕೆಯನ್ನ ಹೊತ್ತುಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಸಿಂಗಾಪುರದಿಂದ ಭಾರತಕ್ಕೆ ಹಿಂತಿರುಗುತ್ತಿದ್ದಂತೆ ತಿರುಮಲಕ್ಕೆ ಬಂದು ಮುಡಿ ನೀಡಿ ಹರಕೆ ತೀರಿಸಿದ್ದಾರೆ. ಇಂದು ಬೆಳಗ್ಗೆ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ತಮ್ಮ ಮಗನ ರಕ್ಷಣೆ ಮಾಡುವಂತೆ ಪವನ್ ಕಲ್ಯಾಣ್ ಪತ್ನಿ ಪ್ರಾರ್ಥನೆ ಮಾಡಲಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow