ದರ್ಶನ್ ಗೆ ಟೆನ್ಷನ್: ಬೇಲ್ ಸಿಗುವ ಹುಮ್ಮಸಿನಲ್ಲಿದ್ದ ಕರಿಯನಿಗೆ ನಿರಾಸೆ!

ಬೆಂಗಳೂರು:- ಬೇಲ್ ಸಿಗುವ ಹುಮ್ಮಸಿನಲ್ಲಿದ್ದ ದರ್ಶನ್ಗೆ ನಿರಾಸೆ ಆಗಿದೆ. ಸೋಮವಾರ ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್ ಇದ್ದಾರೆ. ಆದರೆ, ಜಾಮೀನು ಸಿಗೋದು ಅಷ್ಟು ಸುಲಭದಲ್ಲಿ ಇಲ್ಲ. ದರ್ಶನ್ ಅವರನ್ನು IT ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಇದು ದರ್ಶನ್ಗೆ ತೊಡಕಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಹಣದ ವ್ಯವಹಾರ ಕೂಡ ನಡೆದಿದೆ. ಇದರಿಂದ ದರ್ಶನ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಈ ವಿಚಾರಣೆಯ ಕೆಲ ಅಂಶಗಳು, ಕೊಲೆ ಬಳಿಕ ಹಣ ವಹಿವಾಟು ಮೇಲೆ ಸರ್ಕಾರಿ ವಕೀಲರು ಅಪಸ್ವರ ತೆಗೆಯೋ ಸಾಧ್ಯತೆ ಇದೆ.
ಕೊಲೆ ನಡೆದ ಸ್ಥಳದಲ್ಲಿ ಪವಿತ್ರಾಗೌಡ ಇಲ್ಲ ಎಂದು ಅವರ ಪರ ವಕೀಲರು ವಾದ ಮುಂದಿಟ್ಟಿದ್ದಾರೆ. ಐಟಿ ವಿಚಾರಣೆ ಹಾಗೂ ಪವಿತ್ರಾ ಗೌಡ ಅವರ ನಿಲವು ನೋಡಿಕೊಂಡು ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗುವ ಸಾಧ್ಯತೆ ಇದೆ.
ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿರೋದು ಕೆಳ ಹಂತದ ನ್ಯಾಯಾಲಯದಲ್ಲಿ. ಒಂದೊಮ್ಮೆ ಇಲ್ಲಿ ಜಾಮೀನು ಸಿಗದೇ ಇದ್ದರೆ ಹೈಕೋರ್ಟ್ ಹೋಗಬಹುದು. ಅಲ್ಲಿಯೂ ಅವರಿಗೆ ಬೇಲ್ ಸಿಗದೆ ಇದ್ದರೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಇದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






