ದರ್ಶನ್ ಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್! 

ಅಕ್ಟೋಬರ್ 22, 2024 - 14:02
 0  14
ದರ್ಶನ್ ಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್! 

ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮುಂದೂಡಿಕೆ ಆಗಿದೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ ಎಂದು ಡೇಟ್‌ ಫಿಕ್ಸ್‌ ಆಗಿತ್ತು. ದರ್ಶನ್‌ ಗುಡ್‌ ನ್ಯೂಸ್‌ ನೀಡ್ತಾರೆ ಎಂದು ಫ್ಯಾನ್ಸ್‌ ಊಹಿಸಿದ್ದರು. ಆದರೀಗ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ನ್ಯಾಯಾಲಕ್ಕೆ ಹಾಜರಿದ್ದರು. ನ್ಯಾಯಮೂರ್ತಿ‌ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದೆ. ವಿಡಿಯೋ ಕಾನ್ಪರೆನ್ಸ್ ಮುಖಾಂತರ ಸಿವಿ ನಾಗೇಶ್ ಹಾಜರಿದ್ದರು. ದರ್ಶನ್ ಪರ ಸಿವಿ ನಾಗೇಶ್ ವಾದ ಮಾಡಿದ್ದಾರೆ.

ದರ್ಶನ್ ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗ್ತಾ ಇದೆ. ಅವರಿಗೆ ಅದಷ್ಡು ಬೇಗ ಸರ್ಜಿಕಲ್ ಅಪರೇಶನ್ ಅವಶ್ಯಕತೆ ಇದೆ ಎಂದು ಸಿವಿ ನಾಗೇಶ್ ವಾದ ಮಾಡಿದ್ದಾರೆ ಎನ್ನಲಾಗಿದೆ.

ಕೂಡಲೇ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ ಎನ್ನಲಾಗಿದೆ. ಹಾಗೇ ಇದೇ ತಿಂಗಳ 28ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow