ದರ್ಶನ್ ಫೋಟೊ ವೈರಲ್, ಬದಲಾಗದ ದಾಸ, ಈಗ ರೌಡಿಗಳೇ ಖಾಸ ಖಾಸ, ಪರಂ ಗರಂ.!

ದರ್ಶನ್ ಫೋಟೊ ವೈರಲ್, ಬದಲಾಗದ ದಾಸ, ಈಗ ರೌಡಿಗಳೇ ಖಾಸ ಖಾಸ, ಪರಂ ಗರಂ.!
ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ಈ ಫೋಟೋನ ಅನೇಕರು ಟೀಕೆ ಮಾಡಿದ್ದಾರೆ.
ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರ ಫೋಟೋಗೆ ಅನೇಕರು ಟೀಕೆ ಹೊರ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಕೇಂದ್ರ ಕಾರಾಗೃಹ ಈಗ ರೆಸಾರ್ಟ್ ಆಗಿದೆ ಎಂದು ಅನೇಕರು ಟೀಕೆ ಮಾಡಿದ್ದಾರೆ. ಇನ್ನು, ದರ್ಶನ್ ಫ್ಯಾನ್ಸ್ ಇದನ್ನು ಸಂಭ್ರಮಿಸುತ್ತಿದ್ದಾರೆ. ‘ದರ್ಶನ್ಗೆ ಎಲ್ಲಿದ್ದರೂ ರಾಜಾತಿಥ್ಯ’ ಎಂದು ಖುಷಿಯಿಂದ ಹೇಳಿಕೊಳ್ಳುತ್ತಾ ಇದ್ದಾರೆ. ದರ್ಶನ್ ಅವರು ವಿಲ್ಸನ್ ಗಾರ್ಡ್ ನಾಗ ಮೊದಲಾದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಅವರು ಜೈಲಿನಲ್ಲಿ ಬದಲಾಗಿಲ್ಲ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.
ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






