ದರ್ಶನ್ ಸಲುವಾಗಿ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ’: ಜಗ್ಗೇಶ್ ನೇರ ಮಾತು.!

ಕಲಾವಿದರ ಸಂಘದ ಕಟ್ಟಡದಲ್ಲಿ ಹಲವು ಬಗೆಯ ಪೂಜೆ ಮಾಡಲಾಗಿದೆ. ಇದರಲ್ಲಿ ಅನೇಕ ಕಲಾವಿದರು ಭಾಗಿ ಆಗಿದ್ದಾರೆ. ನಟ ಜಗ್ಗೇಶ್ ಕೂಡ ಆಗಮಿಸಿ ಈ ಪೂಜೆಯ ಬಗ್ಗೆ ಮಾತನಾಡಿದ್ದಾರೆ. ಇಂದು (ಆ.14) ನಡೆದ ಪೂಜೆ ದರ್ಶನ್ ಸಲುವಾಗಿ ಮಾಡಿದ್ದು ಎಂಬ ಗುಮಾನಿ ಕೂಡ ಇದೆ. ಆ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಜಗ್ಗೇಶ್ ಅವರು ನೇರವಾಗಿ ಉತ್ತರ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು ಸೇರಿಕೊಂಡು ಇಂದು (ಆಗಸ್ಟ್ 14) ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಪೂಜೆ, ಹೋಮ ಮುಂತಾದ್ದನ್ನು ಮಾಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಈ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಇದೇ ವೇಳೆ ನಟ ದರ್ಶನ್ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿರುವುದು ಕನ್ನಡ ಚಿತ್ರರಂಗದ ಪಾಲಿಗೆ ಬೇಸರದ ಸಂಗತಿ. ಅವರಿಗೆ ಕಾನೂನಿನ ಕಂಟಕ ಎದುರಾಗಿದೆ. ಆ ಸಲುವಾಗಿಯೇ ಕಲಾವಿದರ ಸಂಘದಲ್ಲಿ ಪೂಜೆ, ಹೋಮ ಮಾಡಲಾಗಿದೆ ಎಂಬ ಅನುಮಾನ ಕೆಲವರಿಗೆ ಇದೆ. ಆ ಪ್ರಶ್ನೆಗೆ ನಟ ಜಗ್ಗೇಶ್ ಅವರು ಉತ್ತರಿಸಿದ್ದಾರೆ.
ನನಗೆ ಕೂಡ ಆರಂಭದಲ್ಲಿ ಅದೇ ರೀತಿಯ ಮಾಹಿತಿ ಬಂತು. ದರ್ಶನ್ಗಾಗಿ ಪೂಜೆ ಆಗಿದ್ದರೆ ನಾನು ಕೂಡ ಬರುತ್ತಿರಲಿಲ್ಲ. ಅದು ಬೇರೆ ಆಯಾಮ ಪಡೆದುಕೊಳ್ಳುತ್ತಿತ್ತು. ಆದರೆ ಇದು ಅದಲ್ಲ. ಕಲಾವಿದರ ಒಳಿತಿಗಾಗಿ ಈ ಪೂಜೆ ನಡೆದಿದೆ. ಕೆಲವರಿಗೆ ಮಾಹಿತಿ ಕೊರತೆ ಆಗಿರಬಹುದು. ಹಾಗಾಗಿ ಅಪಾರ್ಥ ಮಾಡಿಕೊಂಡಿದ್ದಾರೆ. ಅನೇಕರು ಬೇರೆ ವಲಯಗಳಿಂದ ನನಗೆ ಫೋನ್ ಮಾಡಿ ಕೇಳಿದರು. ನನಗೂ ಅನುಮಾನ ಬಂತು. ವಿಚಾರಿಸಿದಾಗ ಆ ಥರ ಅಲ್ಲ ಎಂಬುದು ಗೊತ್ತಾದಮೇಲೆ ನಾನು ಕೂಡ ಬಂದೆ’ ಎಂದು ಜಗ್ಗೇಶ್ ಹೇಳಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






