ದರ್ಶನ್ʼಗೆ ಬೇಲ್ ಮಂಜೂರು ಆಗ್ತಿದ್ದಂತೆ ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ!

ಅಕ್ಟೋಬರ್ 30, 2024 - 13:16
 0  21
ದರ್ಶನ್ʼಗೆ ಬೇಲ್ ಮಂಜೂರು ಆಗ್ತಿದ್ದಂತೆ ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ!

 

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್​​ಗೆ ಕೋರ್ಟ್ ಆರು ವಾರ ಜಾಮೀನು ಮಂಜೂರು ಮಾಡಿದೆ. ಅವರಿಗೆ ಕೋರ್ಟ್ ಅನೇಕ ಷರತ್ತುಗಳನ್ನು ಕೂಡ ಹಾಕಿದೆ. ದರ್ಶನ್​​ಗೆ ಬೇಲ್ ಸಿಕ್ಕ ಖುಷಿಯಲ್ಲಿ ವಿಜಯಲಕ್ಷ್ಮಿ ಬಳ್ಳಾರಿ  ಜೈಲಿಗೆ ಭೇಟಿ ನೀಡಿದ್ರು. ಈ ಬಾರಿ ದರ್ಶನ್ ಪತ್ನಿ ಮುಖದಲ್ಲಿ ಅಭಿಮಾನಿಗಳು ನಗು ಕಂಡಿದ್ದಾರೆ. ಜೈಲಿಗೆ ಆಗಮಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಖುಷಿಯಿಂದಲೇ ಜೈಲಿನ ಸಂದರ್ಶಕರ ಕೊಠಡಿಗೆ ತೆರಳಿದ್ರು.

ಹೌದು  ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್‌ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ.  ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ.

ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಇಂದಿಗೆ 63 ದಿನ. ಅಗಷ್ಟ 29 ರಂದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು. ವಿಜಯಲಕ್ಷ್ಮಿ 10 ಬಾರಿ ಬಳ್ಳಾರಿ ಜೈಲಿಗೆ ಆಗಮಿಸಿ ದರ್ಶನ್​​ರನ್ನು ಭೇಟಿ ಮಾಡಿದ್ದರು.

ಕಾನೂನು ಹೋರಾಟದ ಜೊತೆ ವಿಜಯಲಕ್ಷ್ಮಿ ಗುಡಿ-ಗೋಪುರಗಳನ್ನು ಸಹ ಸುತ್ತಿದ್ರು. ಕೊಲ್ಲೂರು ಮುಕಾಂಬಿಕೆ, ಬೆಂಗಳೂರಿನ ಬನಶಂಕರಿ, ಮೈಸೂರು ಚಾಮುಂಡೇಶ್ವರಿ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಭೇಟಿ ನೀಡಿದ ಪತಿಗಾಗಿ ಹರಕೆ ಹೊತ್ತಿದ್ರು. ಇದೀಗ ವಿಜಯಲಕ್ಷ್ಮಿ ಪೂಜೆ ಫಲಿಸಿದ್ದು, ದಾಸನಿಗೆ ಮಧ್ಯಂತರ ಜಾಮೀನು ಸಿಕ್ಕಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow