ದಸರಾ, ದೀಪಾವಳಿಗೆ ಕೌಂಟ್ ಡೌನ್: ಮಹತ್ವದ ಮಾರ್ಗಸೂಚಿ ಹೊರಡಿಸಿದ ಬಿಬಿಎಂಪಿ!

ಅಕ್ಟೋಬರ್ 10, 2024 - 13:59
 0  9
ದಸರಾ, ದೀಪಾವಳಿಗೆ ಕೌಂಟ್ ಡೌನ್: ಮಹತ್ವದ ಮಾರ್ಗಸೂಚಿ ಹೊರಡಿಸಿದ ಬಿಬಿಎಂಪಿ!

ದಸರಾ, ದೀಪಾವಳಿಗೆ ಕೌಂಟ್ ಡೌನ್ ಶುರುವಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. 

ಹಬ್ಬಗಳಲ್ಲಿ ಉತ್ಪತಿಯಾಗೋ ತ್ಯಾಜ್ಯ ನಿರ್ವಹಣೆಯ ಕುರಿತು ಸೂಚನೆ ಹೊರಡಿಸಿದ್ದು, ರಾಜಧಾನಿಯಲ್ಲಿ ತ್ಯಾಜ್ಯ ಸಮಸ್ಯೆಗೆ ಬ್ರೇಕ್ ಹಾಕಲು ಅಧಿಕಾರಿಗಳಿಗೆ ಗೈಡ್ ಲೈನ್ ಮೂಲಕ ಕಮಿಷನರ್ ಸೂಚನೆ ಕೊಟ್ಟಿದ್ದಾರೆ.

ಪಾಲಿಕೆ ಗೈಡ್ ಲೈನ್ ಪ್ರಮುಖಾಂಶಗಳೇನು
ಬಾಳೇಕಂದು, ಮಾವಿನ ತೋರಣ,ಹಬ್ಬದ ವಸ್ತುಗಳಲ್ಲಿ ಹಸಿ, ಒಣ ಕಸ ವಿಂಗಡನೆಗೆ ಕ್ರಮ
ಮಾರುಕಟ್ಟೆಗಳಲ್ಲಿ ಸ್ವಚ್ಚತೆಯ ಬಗ್ಗೆ ವ್ಯಾಪಾರಿಗಳಿಗೆ ಅರಿವು ಮೂಡಿಸಿ
ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ನಿಗಾ-ಹಬ್ಬದಲ್ಲಿ ಉತ್ಪತಿಯಾಗೋ ಹೆಚ್ಚುವರಿ ತ್ಯಾಜ್ಯ ವಿಲೇವಾರಿಗೆ ತಯಾರಿ
ಬ್ಲಾಕ್ ಸ್ಪಾಟ್ (ಕಸ ಸುರಿಯೋ ಜಾಗ)ಗಳಲ್ಲಿ ನಿಗಾ ಇಡಲು ಸೂಚನೆ
ಬಾಳೆಕಂದು, ಮಾವಿನ ಸೊಪ್ಪು ಇತರೆ ವಸ್ತುಗಳನ್ನ ಹಸಿತ್ಯಾಜ್ಯ ಘಟಕಕ್ಕೆ ನೀಡುವಂತೆ ನಿಗಾ

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜಿಲ್ಲಾಡಳಿತದಿಂದ ರೂಪಿಸಲಾಗಿರುವ ಅಧಿಕೃತ ಜಾಲತಾಣಕ್ಕೆ (https://www.mysoredasara.gov.in) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೇ ದಿನಗಳಲ್ಲಿ ಭಾರಿ ‘ಹಿಟ್ಸ್’ ದೊರೆತಿದೆ. ಸೆ.21ರಂದು ಅನಾವರಣಗೊಳಿಸಲಾಗಿದ್ದ ಈ ಜಾಲತಾಣದಲ್ಲಿ ಆರಂಭದಲ್ಲಿ ಮಾಹಿತಿ ಕೊರತೆ ಎದ್ದು ಕಾಣುತ್ತಿತ್ತು. ನಂತರ ಹಲವು ಮಾಹಿತಿ ಅಪ್‌ಡೇಟ್ ಮಾಡಲಾಗಿದ್ದು ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಮಾಹಿತಿ ಒದಗಿಸಲಾಗುತ್ತಿತ್ತು. ದಸರಾ ಜೊತೆಗೆ ಮೈಸೂರಿನ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳ ಕುರಿತು ಕಿರುಪರಿಚಯವೂ ಈ ಜಾಲತಾಣದಲ್ಲಿದೆ. ಹೀಗಾಗಿ, ನೆಟ್ಟಿಗರು ಹುಡುಕಾಡುತ್ತಿರುವುದು ಕಂಡುಬಂದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow