ದುಡ್ಡಿಲ್ಲದೆ ಚಿಕಿತ್ಸೆ: KSRTC ನೌಕರರ ಬಹುದಿನಗಳ ಕನಸು ಈಡೇರಿಸಿದ ಸಿದ್ದರಾಮಯ್ಯ ಸರ್ಕಾರ!

ಜನವರಿ 6, 2025 - 18:05
 0  14
ದುಡ್ಡಿಲ್ಲದೆ ಚಿಕಿತ್ಸೆ: KSRTC ನೌಕರರ ಬಹುದಿನಗಳ ಕನಸು ಈಡೇರಿಸಿದ ಸಿದ್ದರಾಮಯ್ಯ ಸರ್ಕಾರ!

ಬೆಂಗಳೂರು:- KSRTC ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ನೌಕರರ ಬಹುದಿನಗಳ ಕನಸು ನನಸಾದಂತಾಗಿದೆ. 

ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ರಾಜ್ಯ ಸರ್ಕಾರ ಒಡಬಂಡಿಕೆ ಮಾಡಿಕೊಂಡಿದೆ.  ಈ ಒಡಂಬಡಿಕೆಯಂತೆ ಕೆಎಸ್​ಆರ್​ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್​ಆರ್​ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.

ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow