ದೆಹಲಿಯಲ್ಲಿ ಈಗ ಜಲಮಾಲಿನ್ಯ: ಜೀವನದಿಗಳಲ್ಲಿ ಬರುತ್ತಿದೆ ವಿಷಕಾರಿ ನೊರೆ!

ನವದೆಹಲಿ: ಯಮುನಾ ನದಿಯಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾದ ಕಾರಣ ವಿಷಪೂರಿತ ನೊರೆ ನದಿಯಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಹಿಂದಿನ ವರ್ಷಗಳಿಗಿಂತ ಹೆಚ್ಚು ಪ್ರಮಾಣದ ಮಾಲಿನ್ಯ ಈ ಬಾರಿ ಕಂಡು ಬರುತ್ತಿದೆ. ಕಾಳಿಂದಿ ಕುಂಜ್ ಪ್ರದೇಶದಲ್ಲಿ ಯಮುನಾ ನದಿಯ ಮೇಲ್ಮೈಯಲ್ಲಿ ಭಾರಿ ಪ್ರಮಾಣದ ವಿಷಕಾರಿ ನೊರೆ ತೇಲುತ್ತಿರುವುದು ಕಂಡು ಬಂದಿದೆ. ನದಿಯಲ್ಲಿ ವಿಷಯುಕ್ತ ನೊರೆ ಕಾಣಿಸಿಕೊಳ್ಳಲು ಅಕ್ಷರಶಃ ಮಿತಿಮೀರಿದ ಮಾಲಿನ್ಯವೇ ಕಾರಣ.
ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಆಪ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯಮುನಾ ನದಿಯ ನೀರು ವಿಷಪೂರಿತವಾಗಿದೆ. ಅರವಿಂದ್ ಕೇಜ್ರಿವಾಲ್ ಅವರು 2025ರ ವೇಳೆಗೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಹೇಳಿದ್ದರು. ಈವರೆಗೂ ಏನು ಮಾಡಿದ್ದಾರೆ? ಎಂದು ಹರಿಹಾಯ್ದರು.
ಜನರು ಯಮುನಾ ನದಿಯಲ್ಲಿ ಛತ್ ಪೂಜೆಯ ಹಬ್ಬವನ್ನು ಆಚರಿಸುತ್ತಾರೆ. ಅವರು ಯಾವ ರೋಗಗಳನ್ನು ಎದುರಿಸಬೇಕಾಗುತ್ತದೆ ಎಂದು ನೀವು ಊಹಿಸಬಲ್ಲಿರಾ? ಎಎಪಿ ನೇತೃತ್ವದ ದೆಹಲಿ ಸರ್ಕಾರವು ಯಮುನಾ ನದಿಯನ್ನು ಸ್ವಚ್ಛಗೊಳಿಸಲು ಪಡೆದ ಎಲ್ಲಾ ಹಣವನ್ನು ಜಾಹೀರಾತುಗಳಿಗಾಗಿ ಖರ್ಚು ಮಾಡಿತು. ಈ ಪರಿಸ್ಥಿತಿಗೆ ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ದೂರುತ್ತಾರೆ. ದೆಹಲಿಯಲ್ಲಿ ವಿಷಪೂರಿತ ಗಾಳಿ ಮತ್ತು ನೀರಿಗೆ ವಿಷಕಾರಿ ರಾಜಕಾರಣವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ನಿಮ್ಮ ಪ್ರತಿಕ್ರಿಯೆ ಏನು?






