ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೇರಿದರೆ ಅರ್ಚಕರಿಗೆ ತಿಂಗಳಿಗೆ ₹ 18,000 ವೇತನ: ಕೇಜ್ರಿವಾಲ್ ಘೋಷಣೆ

ಡಿಸೆಂಬರ್ 30, 2024 - 22:02
 0  10
ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೇರಿದರೆ ಅರ್ಚಕರಿಗೆ ತಿಂಗಳಿಗೆ ₹ 18,000 ವೇತನ: ಕೇಜ್ರಿವಾಲ್ ಘೋಷಣೆ

 

ನವದೆಹಲಿ: ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಮುಂಬರುವ ವಿಧಾನಸಭೆ ಚುನಾವಣೆಗೆ ಸಜ್ಜಾಗಿದೆ. ಇಂದು ಆಪ್ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಘೋಷಣೆ ಮಾಡಿದ್ದಾರೆ. ದೆಹಲಿಯ ಎಲ್ಲಾ ಅರ್ಚಕರು ಮತ್ತು ಅರ್ಚಕರಿಗೆ ಪ್ರತಿ ತಿಂಗಳು 18,000 ರೂಪಾಯಿ ವೇತನವನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿಯ ದೇವಸ್ಥಾನಗಳಲ್ಲಿ ಕೆಲಸ ಮಾಡುವ ಅರ್ಚಕರಿಗೆ ಮತ್ತು ಗುರುದ್ವಾರಗಳಲ್ಲಿ ಕೆಲಸ ಮಾಡುವ ಗುರುಗಳಿಗೆ ಪ್ರತಿ ತಿಂಗಳು 18,000 ಗೌರವಧನ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ನಾಳೆಯಿಂದಲೇ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದು, ಮಂಗಳವಾರ, ನಾನೇ ಅದನ್ನು ಕನ್ನಾಟ್ ಪ್ಲೇಸ್ ಹನುಮಾನ್ ದೇವಾಲಯದಿಂದ ಪ್ರಾರಂಭಿಸುತ್ತೇನೆ. ನಂತರ ನಮ್ಮ ಎಲ್ಲಾ ಅಭ್ಯರ್ಥಿಗಳು ಅದನ್ನು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ನೋಂದಾಯಿಸಿಕೊಳ್ಳಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ ಗೆದ್ದರೆ ದೆಹಲಿಯ ದೇವಸ್ಥಾನಗಳ ಅರ್ಚಕರು ಮತ್ತು ಗುರುದ್ವಾರ ಸಾಹಿಬ್ ಗುರುಗಳಿಗೆ ತಿಂಗಳಿಗೆ ₹18,000 ಗೌರವಧನ ನೀಡಲಾಗುತ್ತದೆ. ಯೋಜನೆಯು ಸಮಾಜಕ್ಕೆ ಅವರ ಆಧ್ಯಾತ್ಮಿಕ ಕೊಡುಗೆ ಮತ್ತು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಅವರ ಪ್ರಯತ್ನಗಳಿಗೆ ಗೌರವವಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow