ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದ್ರಾ ಹನುಮಂತ..! ಕಾರಣ ಇಲ್ಲಿದೆ

ಡಿಸೆಂಬರ್ 20, 2024 - 20:02
 0  14
ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದ್ರಾ ಹನುಮಂತ..! ಕಾರಣ ಇಲ್ಲಿದೆ

ಬಿಗ್ಬಾಸ್ಸೀಸನ್ 11, 81ನೇ ದಿನಕ್ಕೆ ಕಾಲಿಟ್ಟಿದೆ. 14ನೇ ವಾರಕ್ಕೆ ಕಾಲಿಡಲು ಸಜ್ಜಾಗಿರೋ ಹೊತ್ತಲ್ಲಿ ಸ್ಪರ್ಧಿಗಳು ಸಖತ್ ಅಲರ್ಟ್ಆಗಿದ್ದಾರೆ. ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಬಿಗ್ಬಾಸ್ ಮನೆಯ ಸದಸ್ಯರಿಗೆ ಹೊಸದೊಂದು ಟಾಸ್ಕ್ ನೀಡಿದ್ದಾರೆ. ಮನೆಯ ಸದಸ್ಯರಲ್ಲಿ ಹೆಚ್ಚು ಪಕ್ಷಪಾತಿ ಯಾರು. ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಶಕ್ತರು, ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಅಶಕ್ತರು ಹಾಗೂ ಜನ ನಿರ್ವಹಣೆಯಲ್ಲಿ ಅಶಕ್ತ ಯಾರು ಅನ್ನೋ ವೋಟಿಂಗ್ ನೀಡಲಾಗಿದೆ.

ಇದರ ಜೊತೆಗೆ  ಹನುಮಂತ ಅವರು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಹೇಳಿದ್ದು ಏನು? ಇದಕ್ಕೆ ಕಾರಣ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ‘ಬಿಗ್ ಬಾಸ್ ಕನ್ನಡ ಸೀಸನ್ 11’ 12ನೇ ವಾರದಲ್ಲಿ ಕ್ಯಾಪ್ಟನ್ಸಿ ರೇಸ್ನಲ್ಲಿ ಆರು ಮಂದಿ ಇದ್ದರು. ಇದನ್ನು ಐದಕ್ಕೆ ಇಳಿಕೆ ಮಾಡಲು ಒಂದು ಟಾಸ್ಕ್ ನೀಡಲಾಗಿತ್ತು. ಪಕ್ಷಪಾತಿ, ಜನ ನಿರ್ವಹಣೆಯಲ್ಲಿ ಅಶಕ್ತ ರೀತಿಯ ನಾಲ್ಕು ಆಯ್ಕೆ ನೀಡಲಾಗಿತ್ತು. ಕ್ಯಾಪ್ಟನ್ಸಿ ರೇಸ್ನಲ್ಲಿ ಇರುವ ಆರು ಮಂದಿಯ ಪೈಕಿ ಒಬ್ಬರ ಗುಣ ಯಾವುದಕ್ಕೆ ಹೊಂದಿಕೆ ಆಗುತ್ತದೆ ಎಂಬುದನ್ನು ಹೇಳಿ ಬಳಿಕ ಅವರನ್ನು ಸ್ವಿಮ್ಮಿಂಗ್ಪೂಲ್ಗೆ ತಳ್ಳಬೇಕು.

ಜನ ನಿರ್ವಹಣೆಯಲ್ಲಿ ಅಶಕ್ತಮತ್ತಿತ್ಯಾದಿ ಆಯ್ಕೆಯಲ್ಲಿ ಹನುಮಂತ ಅವರು ಭವ್ಯಾ ಹೆಸರನ್ನು ತೆಗೆದುಕೊಂಡರು. ಆದರೆ, ಇದನ್ನು ಭವ್ಯಾ ಅವರು ಒಪ್ಪಿಕೊಳ್ಳಲೇ ಇಲ್ಲ. ಬದಲಿಗೆ ಹನುಮಂತ ಬಳಿ ವಾದಕ್ಕೆ ಇಳಿದರು. ವಾದವನ್ನು ಮುಂದುವರಿಸಲು ಹನುಮಂತಗೆ ಯಾವುದೇ ಆಸಕ್ತಿ ಇರಲಿಲ್ಲ. ಹೀಗಾಗಿ, ಅವರು ಸುಮ್ಮನಾದರು. ಆದರೆ, ಭವ್ಯಾ ಮಾತ್ರ ಏನೇನೋ ಮಾತನಾಡುತ್ತಲೇ ಇದ್ದರು. ವಿಚಾರ ಭವ್ಯಾಗೆ ಬೇಸರ ಮೂಡಿಸಿದೆ.

ದೋಸ್ತಾ ಬಸ್ ಬುಕ್ ಮಾಡು, ಊರಿಗೆ ಹೋಗ್ತೀನಿಎಂದು ಹನುಮಂತ ಹೇಳಿದರು. ಇದನ್ನು ಕೇಳಿ ಧನರಾಜ್ಗೆ ಶಾಕ್ ಆಯಿತು. ಅವರು ಹನುಮಂತನ ಸಮಾಧಾನ ಮಾಡಲು ಪ್ರಯತ್ನಿಸಿದರು. ಆದರೆ, ಹನುಮಂತ ಅವರು ಇದಕ್ಕೆ ಒಪ್ಪಿಲ್ಲ. ‘ಇಲ್ಲಿ ನೆನಪು ಇಟ್ಟುಕೊಂಡು ಮಾತನಾಡುವವರು ಬೇಕು. ಆದರೆ, ನನಗೆ ಯಾವುದೂ ನೆನಪಿನಲ್ಲಿ ಇರಲ್ಲ. ಅಷ್ಟುದ್ದ ಮಾತನಾಡೋಕೆ ಬರಲ್ಲ. ನನಗೆ ನೆನಪಿನ ಶಕ್ತಿ ಕಡಿಮೆ ಇದೆಎಂದಿದ್ದಾರೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow