ಧನಂಜಯ್-ಧನ್ಯತಾ ಅರಿಶಿಣ ಶಾಸ್ತ್ರ: ಡಾಲಿ ಮುಖದಲ್ಲಿ ಮದುಮಗನ ಕಳೆ

ನಟ ಡಾಲಿ ಧನಂಜಯ್ ವೈದ್ಯೆ ಧನ್ಯತಾ ಅವರನ್ನು ವಿವಾಹ ಆಗುತ್ತಿರೋ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಕನ್ನಡಿಗರ ಅಚ್ಚು ಮೆಚ್ಚಿನ ನಟ ಡಾಲಿ ಧನಂಜಯ ವಿವಾಹ ಬಂಧಿಯಾಗಲು ರೆಡಿಯಾಗಿದ್ದಾರೆ. ವೈದ್ಯೆ ಧನ್ಯತಾ ಜೊತೆಗೆ ಹಸೆಮಣೆ ಏರುತ್ತಿದ್ದಾರೆ. ಇನ್ನೂ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿ ಹಳದಿ ಶಾಸ್ತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.
ನಟನ ಹಳದಿ ಶಾಸ್ತ್ರ ಸಮಾರಂಭಕ್ಕೆ ಹಿರಿಯ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್ ಮತ್ತು ಕುಟುಂಬದವರು ಆಗಮಿಸಿ ಶುಭಕೋರಿದ್ದಾರೆ. ಜರ್ಮನಿಯ ರಂಗ ನಿರ್ದೇಶಕ ಕ್ರಿಸ್ಟೆನ್ ಭಾಗವಹಿಸಿದ್ದು ಕೂಡ ವಿಶೇಷವಾಗಿತ್ತು. ಹಳದಿ ಶಾಸ್ತ್ರ ಸಮಾರಂಭದಲ್ಲಿ ಧನಂಜಯ್ ಮತ್ತು ಧನ್ಯತಾ ಜೋಡಿ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಪಾಲ್ಗೊಂಡು ಶುಭಹಾರೈಸಿದ್ದಾರೆ.
ಇಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಟ ಮತ್ತು ಡಾಕ್ಟರ್ ಜೋಡಿ ಆರತಕ್ಷತೆ ನಡೆಯಲಿದೆ. ಇಂದು ಬೆಳಗ್ಗೆಯಿಂದಲೇ ಶಾಸ್ತ್ರಗಳು ನಡೆಯಲಿವೆ. ಸಂಜೆ 6 ಗಂಟೆಯ ನಂತರ ಆರತಕ್ಷತೆ ಕಾರ್ಯಕ್ರಮ ಇರಲಿದೆ. ನಾಳೆ ಬೆಳಗ್ಗೆ ಧಾರಾ ಮುಹೂರ್ತ ನಡೆಯಲಿದೆ. ಆರತಕ್ಷತೆಗೆ ಸ್ಯಾಂಡಲ್ವುಡ್ ತಾರೆಯರು, ರಾಜಕೀಯ ರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






