ಧರ್ಮ, ಜಾತಿ ಇಲ್ಲದೆ 5 ಗ್ಯಾರಂಟಿ ಯೋಜನೆ ಜನರಿಗೆ ನೀಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ 8, 2024 - 21:08
 0  6
ಧರ್ಮ, ಜಾತಿ ಇಲ್ಲದೆ 5 ಗ್ಯಾರಂಟಿ ಯೋಜನೆ ಜನರಿಗೆ ನೀಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂಡೂರು: ಧರ್ಮ, ಜಾತಿ ಇಲ್ಲದೆ 5 ಗ್ಯಾರಂಟಿ ಯೋಜನೆ ಜನರಿಗೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭಿನಂದನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಅನ್ನಪೂರ್ಣಗೆ ನಿಮ್ಮ ಆಶೀರ್ವಾದ ಇರಲಿ ಎಂದು ಮನವಿ ಮಾಡಿದ್ದೆ. ಇಂದು ಸಂವಿಧಾನ ಉಳಿವಿಗೆ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ಬಿಜೆಪಿ ಬಡವರ ಪರವಾದ ಪಕ್ಷ ಅಲ್ಲ ಎಂದು ನಾನು ಮನವಿ ಮಾಡಿದ್ದೆ. ಧರ್ಮ, ಜಾತಿ ಇಲ್ಲದೆ 5 ಗ್ಯಾರಂಟಿ ಯೋಜನೆ ಜನರಿಗೆ ನೀಡಿದ್ದೇವೆ ಎಂದು ಹೇಳಿದರು.

ಇನ್ನು ಶಿಗ್ಗಾವಿ, ಚನ್ನಪಟ್ಟಣದಲ್ಲಿ ತಮ್ಮ ಮಕ್ಕಳನ್ನು ಅಭ್ಯರ್ಥಿ ಮಾಡಿ ನೂರಾರು ಕೋಟಿ ಖರ್ಚು ಮಾಡಿದರು. ಅವರು ಗೆದ್ದ ಕ್ಷೇತ್ರದಲ್ಲಿ ನಮ್ಮನ್ನು ಗೆಲ್ಲಿಸಿದ್ರು. ಮೊದಲು ಜನರ ಮನಸ್ಸು ಗೆಲ್ಲಿ, ಅಪಪ್ರಚಾರ ಮಾಡುವುದನ್ನು ಬಿಡಿ. ಮಾನ ಮರ್ಯದೆ ಇದ್ದರೆ ಸರ್ಕಾರದ ಜೊತೆಗೆ ಸಹಕರಿಸಿ. ಟೀಕೆ ಮಾಡಲು ಸುಳ್ಳು ಆರೋಪ, ಅಪಪ್ರಚಾರ ಮಾಡಬೇಡಿ ಎಂದು ಬಿಜೆಪಿ, ಜೆಡಿಎಸ್ನಾಯಕರ ವಿರುದ್ಧ ಕಿಡಿಕಾರಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow