ಧರ್ಮಸ್ಥಳ ಬುರುಡೆ ಪ್ರಕರಣ: ತಿಮರೋಡಿ ಸೇರಿ ನಾಲ್ವರಿಗೆ SIT ನೋಟಿಸ್ ಜಾರಿ
ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದ ತನಿಖೆಯಲ್ಲಿ ಎಸ್ಐಟಿ (SIT) ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ.
ನಾಲ್ವರಿಗೆ ನೋಟಿಸ್ ನೀಡಿದ ಎಸ್ಐಟಿ
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ಮತ್ತು ವಿಠಲ ಗೌಡ ಎಂಬ ನಾಲ್ವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ.
ಸೋಮವಾರ ಬೆಳಗ್ಗೆ ವಿಚಾರಣೆ ನಿಗದಿ
ಸೋಮವಾರ (27 ಅಕ್ಟೋಬರ್ 2025) ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ನ್ನು ತನಿಖಾಧಿಕಾರಿ ಜಿತೇಂದ್ರ ದಯಾಮಾ ನೀಡಿದ್ದು, ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಕಾನೂನು ಪ್ರಕಾರ ನೋಟಿಸ್ ಜಾರಿ
ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆಯ ಕಲಂ 35(3) ಅಡಿಯಲ್ಲಿ ಈ ನೋಟಿಸ್ ನೀಡಲಾಗಿದೆ. 04 ಜುಲೈ 2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ಈ ವಿಚಾರಣೆ ನಡೆಯಲಿದೆ.
ತನಿಖೆಗೆ ಸಹಕಾರ ನೀಡುವಂತೆ ಸೂಚನೆ
ನೋಟಿಸ್ನಲ್ಲಿ ಪ್ರಕರಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ, ವಿಚಾರಣೆಗೆ ಹಾಜರಾಗುವ ಮೂಲಕ ತನಿಖೆಗೆ ಅಗತ್ಯ ಮಾಹಿತಿಯನ್ನು ನೀಡುವಂತೆ ಎಸ್ಐಟಿ ನಾಲ್ವರಿಗೆ ಸೂಚಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?