ನಕ್ಸಲ್ ವಿಕ್ರಮ್ ಗೌಡ ಎನ್ʼಕೌಂಟರ್: ಕಾರ್ಯಾಚರಣೆ ಕುರಿತು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು..?

ನವೆಂಬರ್ 19, 2024 - 11:52
 0  10
ನಕ್ಸಲ್ ವಿಕ್ರಮ್ ಗೌಡ ಎನ್ʼಕೌಂಟರ್: ಕಾರ್ಯಾಚರಣೆ ಕುರಿತು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಸಂಬಂಧಪಟ್ಟಂತೆ  ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಿನ್ನೆ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ರಾತ್ರಿ ಖಚಿತ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ.

ಆತ ಆತ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದ. ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಆತನ ಜತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರೆದಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು. ಮೊದಲಿಗೆ ವಿಕ್ರಮ್ ತಂಡ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಜೊತೆಯಲ್ಲಿದ್ದ ಇಬ್ಬರು-ಮೂವರು ಪರಾರಿಯಾಗಿದ್ದಾರೆ. ಇದೀಗ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow