ನಟ ದರ್ಶನ್‌ʼಗೆ ಮತ್ತೆ ಶಾಕ್‌: ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್‌

ಸೆಪ್ಟೆಂಬರ್ 30, 2024 - 16:02
 0  8
ನಟ ದರ್ಶನ್‌ʼಗೆ ಮತ್ತೆ ಶಾಕ್‌: ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್‌

 ಬೆಂಗಳೂರು: ದರ್ಶನ್ ಆ್ಯಂಡ್ ಗ್ಯಾಂಗ್​​ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು ಸೆಷನ್ ಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ನಟ ದರ್ಶನ್ ಜಾಮೀನು ಸಿಗುವ ನಿರೀಕ್ಷೆಯಲ್ಲಿ ಇದ್ದರು. ಆದರೆ, ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. 

ಅಕ್ಟೋಬರ್​ 4ರಂದು ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಮನವಿ ಮಾಡಿದ್ದಾರೆ.

ಸೆಷನ್ಸ್​ ನ್ಯಾಯಾಲಯದಲ್ಲೇ ದರ್ಶನ್​ಗೆ ಜಾಮೀನು ಸಿಗಲಿದೆ ಎಂದು ದರ್ಶನ್​ ಪರ ವಕೀಲರು ಇತ್ತೀಚೆಗೆ ಭರವಸೆ ವ್ಯಕ್ತಪಡಿಸಿದ್ದರು. ಒಂದು ವೇಳೆ ಸೆಷನ್ಸ್​ ಕೋರ್ಟ್​ನಲ್ಲಿ ಬೇಲ್ ಸಿಗದಿದ್ದರೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗುವುದು. ದರ್ಶನ್​ಗೆ ಜಾಮೀನು ಕೊಡಿಸಲು ಪತ್ನಿ ವಿಜಯಲಕ್ಷ್ಮಿ ಅವರು ಕಷ್ಟಪಡುತ್ತಿದ್ದಾರೆ. ಸಾಕಷ್ಟು ದೇವರುಗಳ ಮೊರೆ ಹೋಗ್ತಿದ್ದಾರೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow