ನಟ ದರ್ಶನ್ʼಗೆ ಮಧ್ಯಂತರ ಜಾಮೀನು: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ!

ಬೆಂಗಳೂರು: ನಟ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಲು ಇದೀಗ ಪೊಲೀಸರು ಹೆಜ್ಜೆಯಿಟ್ಟಿದ್ದಾರೆ. ಮೊದಲು ಕಾನೂನು ಸಲಹೆ ಪಡೆದು ಇದೀಗ ಗೃಹ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು. ಇದೀಗ ದರ್ಶನ್ ಮಧ್ಯಂತರ ಜಾಮೀನು ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅಪೀಲು ಸಲ್ಲಿಸಲು ಅನುಮತಿ ಸಿಕ್ಕಿದೆ. ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಲು ಸಿದ್ದತೆ ಆಗುತ್ತಿದೆ. ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬಹುದು.
ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಸುಪ್ರೀಂ ಕೋರ್ಟ್ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ. ದರ್ಶನ್ ಅವರು ಈವರೆಗೆ ಯಾವುದೇ ಆಪರೇಷನ್ ಮಾಡಿಸಿಕೊಂಡಿಲ್ಲ. ಈ ಬಗ್ಗೆ ಹಲವು ಅನುಮಾನಗಳು ಎದ್ದಿವೆ. ಜಾಮೀನಿನ ಅವಧಿ ಮುಗಿಯುವ ಸಂದರ್ಭದಲ್ಲಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರು ವಿಶ್ರಾಂತಿ ಪಡೆಯಲು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.
ನಿಮ್ಮ ಪ್ರತಿಕ್ರಿಯೆ ಏನು?






