ನಟ ದರ್ಶನ್'ಗೆ ಆಪರೇಷನ್ ಮಾಡೋ ಮುಹೂರ್ತ ಫಿಕ್ಸ್! ದಾಸನ ಭವಿಷ್ಯವೂ ಇದ್ರಿಂದ ಫೈನಲ್!

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ ಬೇಲ್ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ದರ್ಶನ್ಗೆ ಆಪರೇಷನ್ ಕಂಟಕ ಎದುರಾಗಿದೆ. ದಾಸ ಸರ್ಜರಿ ಮಾಡಿಸಿಕೊಳ್ಳದಿದ್ರೆ, ಮತ್ತೆ ಬಳ್ಳಾರಿ ಜೈಲು ಪಾಲಾಗೋದು ಗ್ಯಾರಂಟಿ ಎನ್ನಲಾಗಿದೆ. ದರ್ಶನ್ ಹೆಲ್ತ್ ರಿಪೋರ್ಟ್ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದು, ಅದ್ರಲ್ಲಿ ನಟನ ಆಪರೇಷನ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಉಲ್ಲೇಖಿಸಲಾಗಿದೆ.
ಆದ್ರೆ ಇದರ ಬೆನ್ನಲ್ಲೇ ಬೆನ್ನು ನೋವಿನ ಸಮಸ್ಯೆ ಉಲ್ಬಣಿಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.
ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ಸರ್ಜರಿಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಪಿಜಿಯೋಥೆರಪಿ ಜೊತೆ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ. ಕೇವಲ ಪಿಜಿಯೋಥೆರಪಿಯಿಂದ ಬೆನ್ನು ನೋವು ಗುಣಮುಖ ಸಾಧ್ಯವಿಲ್ಲ ಎಂದು ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು ದರ್ಶನ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಸರ್ಜರಿಗೆ ಒಪ್ಪಿಗೆ ಸೂಚಿಸಿದ್ದಾರಂತೆ.
ಬಿಜಿಎಸ್ ಆಸ್ಪತ್ರೆ ವೈದ್ಯರ ತಂಡದ ಮನವರಿಕೆ ಬೆನ್ನಲ್ಲೇ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಸರ್ಜರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಅಂತೆಯೇ ದರ್ಶನ್ಗೆ ಸರ್ಜರಿ ಮಾಡಲು ಬಿಜಿಎಸ್ ವೈದ್ಯರ ತಂಡ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೊಮ್ಮೆ ಕೊನೆಯ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ವಿಶ್ರಾಂತಿಗಾಗಿ ದರ್ಶನ್ ಕೋರ್ಟ್ ಬಳಿ ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಜೂನ್ 11ರಂದು ಬಂಧಿತರಾದರು. ಸುಮಾರು 130 ದಿನಗಳ ಕಾಲ ಅವರು ಜೈಲಿನಲ್ಲೇ ಇದ್ದರು. ಅವರ ಜಾಮೀನು ಅರ್ಜಿ ಕೆಳ ಹಂತದ ಕೋರ್ಟ್ನಲ್ಲಿ ರದ್ದಾಗಿತ್ತು. ಹೀಗಾಗಿ, ಹೈಕೋರ್ಟ್ ಮೊರೆ ಹೋಗಿದ್ದ ದರ್ಶನ್, ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






