ನಟಿ ಶೋಭಿತಾ ಶಿವಣ್ಣ ಮರಣೋತ್ತರ ಪರೀಕ್ಷೆ ಮುಕ್ತಾಯ.! ವೈದ್ಯರು ಹೇಳಿದ್ದೇನು ಗೊತ್ತಾ..?

ಡಿಸೆಂಬರ್ 2, 2024 - 17:57
 0  16
ನಟಿ ಶೋಭಿತಾ ಶಿವಣ್ಣ ಮರಣೋತ್ತರ ಪರೀಕ್ಷೆ ಮುಕ್ತಾಯ.! ವೈದ್ಯರು ಹೇಳಿದ್ದೇನು ಗೊತ್ತಾ..?

ಕನ್ನಡದ, ತೆಲುಗು ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ‌ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್‌ ಟು ಮರ್ಡರ್, ವಂದನಾ ಸಿನಿಮಾದಲ್ಲಿ ನಟಿಸಿದ್ದರು ಈ ಶೋಭಿತಾ ಇನ್ನು ಕಿರುತೆರೆಯಲ್ಲಿ ಬ್ರಹ್ಮಗಂಟು ಹಾಗೂ ನಿನ್ನಿಂದಲೇ ಧಾರಾವಾಹಿಯಲ್ಲಿ ಸಹ ನಟಿಸಿದ್ದರು. ಇದೀಗ ತೆಲುಗು ಚಿತ್ರರಂಗದಲ್ಲಿ ನಟಿಸುತ್ತಾ ಅಲ್ಲೇ ಹೈದ್ರಾಬಾದ್‌ನಲ್ಲಿ ನೆಲೆಸಿದ್ದರು. ಕಳೆದ ವರ್ಷ ಮದುವೆ ಮಾಡಿಕೊಂಡಿದ್ದ ಶೋಭಿತಾ ಶಿವಣ್ಣ ಅವರು ಇದೀಗ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಇನ್ನೂ ಪೋಸ್ಟ್​ ಮಾರ್ಟಮ್​ ಅಂತ್ಯಗೊಂಡ ಬಳಿಕ ವೈದ್ಯರು ನಟಿಯ ಸಾವಿಗೆ ಕಾರಣ ಏನು ಎಂಬದನ್ನು ತಿಳಿಸಿದ್ದಾರೆ. ಶೋಭಿತಾ ಶಿವಣ್ಣ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಆತ್ಮಹತ್ಯೆಯಿಂದಲೇ ಶೋಭಿತಾ ನಿಧರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಶೋಭಿತಾ ಅವರು ಮದುವೆ ಆದ ಬಳಿಕ ಹೈದರಾಬಾದ್​ನಲ್ಲಿ ಪತಿಯ ಜೊತೆ ನೆಲೆಸಿದ್ದರು. ಅಪಾರ್ಟ್​ಮೆಂಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಯಾರಾದರೂ ನಟಿಯನ್ನು ಹತ್ಯೆ ಮಾಡಿರಬಹುದೇ ಎಂಬ ಪ್ರಶ್ನೆ ಕೂಡ ಉದ್ಭವ ಆಗಿತ್ತು. ಆದರೆ ಶೋಭಿತಾ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಾಣಿಸಿಲ್ಲ. ಹಾಗಾಗಿ ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂಬುದು ಖಚಿತವಾಗಿದೆ.

ಶೋಭಿತಾ ಸಾವಿನ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಆರಂಭಿದ್ದಾರೆ. ಶೋಭಿತಾ ಬರೆದಿದ್ದರು ಎನ್ನಲಾದ ಸೂಸೈಡ್​ ನೋಟ್​ ಕೂಡ ಲಭ್ಯವಾಗಿದೆ. ‘ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು’ ಎಂದು ಇದರಲ್ಲಿ ಬರೆಯಲಾಗಿದೆ. ಅಲ್ಲದೇ, ‘ಜೀವನದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿದೆ’ ಎಂದು ಸಹ ಬರೆಯಲಾಗಿದ್ದು, ಈ ಸಾಲುಗಳ ಅರ್ಥ ಏನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ನಟಿಯ ಆತ್ಮಹತ್ಯೆ ಸಂಬಂಧಿಸಿದಂತೆ ನೆರೆಹೊರೆಯವರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಶೋಭಿತಾ ಅವರ ಸಂಸಾರದಲ್ಲಿ ಏನಾದರೂ ಬಿರುಕು ಮೂಡಿತ್ತಾ ಎಂಬುದನ್ನು ಕೂಡ ಪತ್ತೆ ಹಚ್ಚಲಾಗುತ್ತಿದೆ. ಶೋಭಿತಾ ಅವರು ಮೂಲತಃ ಹಾಸನ‌‌ ಮೂಲದ ಸಕಲೇಶಪುರದವರು. ಹೈದರಾಬಾದ್​ನಲ್ಲಿ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಕುಟುಂಬದವರು ಬೆಂಗಳೂರಿಗೆ ಮೃತದೇಹ ತರುತ್ತಿದ್ದಾರೆ ಎಂಬ ಮಾಹಿತಿ ಇದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow