'ನನಗೆ 2 ಕೋಟಿ ಹಣ ಬೇಕು': ದೇವರ ಹುಂಡಿಯಲ್ಲಿ ಸಿಕ್ತು ಭಕ್ತನ ವಿಚಿತ್ರ ಬೇಡಿಕೆ ಪತ್ರ!

ಭಕ್ತರು ಇತ್ತೀಚಿಗೆ ದೇವರ ಕಾಣಿಕೆ ಹುಂಡಿಗಳಲ್ಲಿ ಚಿತ್ರ ವಿಚಿತ್ರವಾದ ಬೇಡಿಕೆಗಳನ್ನು ಹೊತ್ತ ಕಾಗದದ ಪತ್ರಗಳನ್ನು ಹಾಕಿ ಮನವಿ ಮಾಡಿಕೊಳ್ಳುವುದು ಸಮಾನ್ಯವಾಗಿದೆ. ಈ ನಡುವೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ಸ್ವಾಮಿಗೆ ಓರ್ವಭಕ್ತ ವಿಚಿತ್ರವಾಗಿ ಹರಕೆ ಕಟ್ಟಿಕೊಂಡಿದ್ದಾರೆ.
“ಎರಡು ಕೋಟಿ ಹಣ ಬೇಕು” ಒಂದು ಚೀಟಿಯಲ್ಲಿ ಬರೆದು ದೇವರ ಹುಂಡಿಯಲ್ಲಿ ಹಾಕಿದ್ದಾರೆ. ಶಿವರಾತ್ರಿಯ ದಿನ ಶ್ರೀ ಮಾರ್ಕಂಡೇಶ್ವರ ಸ್ವಾಮಿ ಬಳಿ ಭಕ್ತ ಎರಡು ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ. ಎರಡು ಕೋಟಿ ಹಣ ಬೇಕು ಎಂದು ಪತ್ರದಲ್ಲಿ ಬರೆದು ಹರಕೆ ಹುಂಡಿಯಲ್ಲಿ ಹಾಕಿದ್ದಾರೆ. ಹುಂಡಿ ಹಣ ಎಣಿಕೆ ವೇಳೆ ಸಿಕ್ಕ ಭಕ್ತನ ಬೇಡಿಕೆ ಚೀಟಿ ಸಿಕ್ಕಿದೆ.
ನಿಮ್ಮ ಪ್ರತಿಕ್ರಿಯೆ ಏನು?






