ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ. ಒಂದು ಅವಕಾಶ ಕೊಡಿ: ನಿಖಿಲ್ ಕುಮಾರಸ್ವಾಮಿ

ರಾಮನಗರ: ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ. ಒಂದು ಅವಕಾಶ ಕೊಡಿ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಜನತೆ ಮುಂದೆ ಕೇಳಿಕೊಂಡರು. ನಗರದಲ್ಲಿ ಮಾತನಾಡಿದ ಅವರು, ಒಂದೇ ಒಂದು ಅವಕಾಶ ಕೊಡಿ. ದೇವೇಗೌಡರು, ಕುಮಾರಣ್ಣ ಅವ್ರು ಕೆಲಸ ಮಾಡಿದ್ದಾರೆ. ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ.
ಒಂದು ಅವಕಾಶ ಕೊಡಿ. ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇರಬಹುದು. ಈ ಜಿಲ್ಲೆಗೆ ಹಲವಾರು ವರ್ಷದ ನಂಟಿದೆ. ದೇವೇಗೌಡರು ಇಗ್ಗಲೂರು ಬ್ಯಾರೇಜ್ ಕಟ್ಟದೆ ಹೋದ್ರೆ ಎಲ್ಲಿ ಕೆರೆಗೆ ನೀರು ತುಂಬಿಸುತ್ತಿದ್ದರು? ಗೋಲಿಬಾರ್ ಆಗಿ ಇಬ್ರು ತೀರಿಕೊಂಡ್ರು. ನಾನು ಆಗ ಚಿಕ್ಕ ಹುಡುಗ, ದೇವೇಗೌಡರು ಪಾಠ ಮಾಡಿದ್ದಾರೆ ಎಂದು ನೆನಪಿಸಿಕೊಂಡರು.
ಕುಮಾರಸ್ವಾಮಿ ದೇವೇಗೌಡರು ಕಣ್ಣಲ್ಲಿ ನೀರಾಕ್ತಾರೆ ಮರಳಾಗಬೇಡಿ ಅಂತಾರೆ. ಅವ್ರು ಕಣ್ಣೀರಾಕೋದು ನನಗಾಗಿ ಅಲ್ಲ. ರೈತರ ಪರವಾಗಿ, ನಾಡಿನ ಜನರು ನೋವಿನಲ್ಲಿದ್ದಾಗ ಕಣ್ಣಲ್ಲಿ ನೀರಾಕಿದ್ದಾರೆ. ಅದನ್ನ ಹೊರತುಪಡಿಸಿ ಅವರು ನನಗಾಗಿ ಕಣ್ಣೀರು ಹಾಕಲಿಲ್ಲ. ನನಗೆ ಆತ್ಮವಿಶ್ವಾಸ ತುಂಬಿ ದೇವೇಗೌಡ್ರು ಕಳುಹಿಸಿದ್ದಾರೆ. ನಿಮ್ಮ ಸಹಕಾರ ಇರಲಿ ಎಂದು ಜನತೆಯಲ್ಲಿ ಕೇಳಿಕೊಂಡರು.
ನಿಮ್ಮ ಪ್ರತಿಕ್ರಿಯೆ ಏನು?






