ನನ್ನ ಜೀವಕ್ಕೆ ಏನಾದ್ರೂ ಆದ್ರೆ ಅದಕ್ಕೆ ಡಿಕೆಶಿ, ಸಚಿವೆ ಹೆಬ್ಬಾಳ್ಕರ್ ಕಾರಣ: ಸಿ.ಟಿ ರವಿ

ಬೆಂಗಳೂರು: ಪೊಲೀಸರಿಂದ ಜೀವಕ್ಕೆ ಅಪಾಯವಿದೆ. ಅನುಮಾನಾಸ್ಪದವಾಗಿ, ನಿಗೂಢವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ಎಂಎಲ್ಸಿ ಸಿ.ಟಿ ರವಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು, ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ.
ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೇಸ್ ಸರ್ಕಾರವೇ ಕಾರಣ ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ, ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






