ನಮಗೆ ಅವತ್ತು ಅಧಿಕಾರ ಇದಿದ್ದರೆ ಅಂಬೇಡ್ಕರ್ ಅವರನ್ನೇ ಪ್ರಧಾನಿ ಮಾಡುತ್ತಿದ್ದೆವು: MLC ರವಿಕುಮಾರ್

ಬೆಂಗಳೂರು: ನಮಗೆ ಅವತ್ತು ಅಧಿಕಾರ ಇದಿದ್ದರೆ ಅಂಬೇಡ್ಕರ್ ಅವರನ್ನೇ ಪ್ರಧಾನಿ ಮಾಡುತ್ತಿದ್ದೆವು ಎಂದು ಬಿಜೆಪಿ MLC ರವಿಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಗಾಂಧಿಜಿ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್ನವರು, ಅಮಿತ್ ಶಾ ಅಲ್ಲ.
ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಭಾರತರತ್ನ ಕೊಡಲಿಲ್ಲ. ಶವ ಸಂಸ್ಕಾರಕ್ಕೆ ಹಣ ಕೊಡಲಿಲ್ಲ. ಅಂಬೇಡ್ಕರ್ ಅವರನ್ನ ಸೋಲಿಸಿದ್ರಿ. ದೆಹಲಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಕೊಡಲಿಲ್ಲ. ನಮಗೆ ಅವತ್ತು ಅಧಿಕಾರ ಇದಿದ್ದರೆ ಅಂಬೇಡ್ಕರ್ ಅವರನ್ನೇ ಪ್ರಧಾನಿ ಮಾಡುತ್ತಿದ್ದೆವು. ಲಜ್ಜೆಗೆಟ್ಟ ಕಾಂಗ್ರೆಸ್ ಅಂಬೇಡ್ಕರ್ ಅವರನ್ನ ಸೋಲಿಸಿದರು ಎಂದು ವಾಗ್ದಾಳಿ ನಡೆಸಿದ್ದಾರೆ.
ನೀರು, ವಿದ್ಯುತ್ ದರ, ಮದ್ಯ, ಬೆಲೆ ಏರಿಕೆ ಆಗ್ತಿದೆ. ಯಾವಾಗ ಹಣ ಬೇಕೋ ಆಗ ಬೆಲೆ ಏರಿಕೆ ಮಾಡ್ತಾರೆ. ಇದು ಕಾಂಗ್ರೆಸ್ನ ಹೊಸ ಪಾಲಿಸಿಯಾಗಿದೆ. ಅಧಿಕಾರಿಗಳು ಭ್ರಷ್ಟರಂತೆ ಇವರು ಪ್ರಾಮಾಣಿಕರಂತೆ. ಅಧಿಕಾರಿಗಳು ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಗಾಂಧಿ ಕಂಡ ಭಾರತ ಮಾಡ್ತಿರೋದು ಕಾಂಗ್ರೆಸ್ನವರಲ್ಲ. ನರೇಂದ್ರ ಮೋದಿಯವರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಆಗ್ರಹಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






