ನಮಗೆ ಬೇರೆಯವರಂತೆ ದೇಶ ವಿದೇಶಗಳಲ್ಲಿ ಆಸ್ತಿ ಮಾಡಿಡುವ ಆಸಕ್ತಿ ಇಲ್ಲ: ವಿಜಯೇಂದ್ರ ಟಾಂಗ್ ಕೊಟ್ಟ ಯತ್ನಾಳ್

ಕಲಬುರಗಿ: ನಮಗೆ ಬೇರೆಯವರಂತೆ ದೇಶ ವಿದೇಶಗಳಲ್ಲಿ ಆಸ್ತಿ ಮಾಡಿಡುವ ಆಸಕ್ತಿ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ರಿಂದ ಪಕ್ಷದ ಡ್ಯಾಮೇಜ್ ಕಡಿಮೆ ಆಗಿದೆ ಎನ್ನುವ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಅವರು,
ನಮ್ಮಿಂದ ಡ್ಯಾಮೇಜ್ ಆಗಿಲ್ಲ. ಯತ್ನಾಳರಿಂದಲೇ ನಮ್ಮ ಪಾರ್ಟಿಯ ಕಾರ್ಯಕರ್ತರು ಜೀವಂತವಾಗಿದ್ದಾರೆ. ಹಾಗೆ ನೋಡಿದ್ರೆ ನಮ್ಮ ಪಕ್ಷಕ್ಕೆ ನಾವೇ ಆಶಾಕಿರಣ. ನಮಗೆ ಬೇರೆಯವರಂತೆ ದೇಶ ವಿದೇಶಗಳಲ್ಲಿ ಆಸ್ತಿ ಮಾಡಿಡುವ ಆಸಕ್ತಿ ಇಲ್ಲ ಎಂದರು.
ವಿಜಯೇಂದ್ರ ದುಬೈನಲ್ಲಿ, ಸಿಂಗಾಪೂರನಲ್ಲಿ ಆಸ್ತಿ ಮಾಡಿಟ್ಟು ಏನು ಮಾಡ್ತಾನೆ. ಜನರಿಗೆ ದಾನ ಕೊಡು ಒಳ್ಳೆಯದಾಗುತ್ತೆ. ನಮಗೆ ಒಳ್ಳಯದಾಗಲಿ ಅಂತ ವಿಜಯೇಂದ್ರ ಅಂತಾನಾ?. ಯಾರಿಗಾದ್ರೂ ಒಳ್ಳೆಯದಾಗಲಿ ಅನ್ನೋದು ಅವರಿಂದ ಹೇಳಲು ಸಾಧ್ಯವೇ ಇಲ್ಲ ಎಂದರು.
ಚುನಾವಣೆ ನಡೆದು ಅವರೇ ಮತ್ತೊಮ್ಮೆ ರಾಜ್ಯಾಧ್ಯಕ್ಷರಾದರೆ ಆಗಲಿ, ಬೇಡ ಅಂದವರಾರು ? ಅಲ್ಲಿವರೆಗೂ ನನಗೆ ಓಟ್ ಹಾಕಿ ನನಗೆ ಓಟ್ ಹಾಕಿ ಅಂತ ಕೈ ಮುಗಿದು ಅವರು ಓಡಾಡಬೇಕಲ್ವಾ ?. ಕೆಲವರಿಗೆ ಕೈ ಮುಗಿಯೋದಾದ್ರೂ ನಾವು ಕಲಿಸದಂಗೆ ಆಗುತ್ತೆ. ನಮ್ಮ ಬಣದಿಂದ ಯಾರು ಸ್ಪರ್ಧೆ ಮಾಡ್ತೀವಿ ಅನ್ನೋದು ಚರ್ಚೆ ಮಾಡಿ ನಿರ್ಣಯ ತಗೋತಿವಿ. ಹೈಕಮಾಂಡನ ಜಾತಿ ಲೆಕ್ಕಾಚಾರ ನೋಡಿಕೊಂಡು ಅದೇ ಜಾತಿಯವರನ್ನು ನಾವು ಕಣಕ್ಕೆ ಇಳಿಸುತ್ತೇವೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






