ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು: ಸಿಎಂ ಸಿದ್ದರಾಮಯ್ಯ

ನವೆಂಬರ್ 1, 2024 - 14:08
 0  12
ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರೆಸಿ ಮಾತನಾಡಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರ ಜೊತೆಯಲ್ಲಿಯೂ ಕನ್ನಡದಲ್ಲಿಯೇ ಮಾತನಾಡಿ.

ಕನ್ನಡ ಬಾರದವರಿಗೆ ಕನ್ನಡ ಕಲಿಸಬೇಕು, ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಎಲ್ಲರೂ ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ. ನಾವು ಕನ್ನಡಿಗರಾಗಿರುತ್ತೇವೆ. ಬೇರೆಯವರನ್ನೂ ಕನ್ನಡಿಗರಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಶಪಥ ಮಾಡೋಣ ಎಂದು ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow