ನಮ್ಮ ಮೆಟ್ರೋ ಟ್ರ್ಯಾಕ್ʼಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು

ಸೆಪ್ಟೆಂಬರ್ 17, 2024 - 17:36
 0  8
ನಮ್ಮ ಮೆಟ್ರೋ ಟ್ರ್ಯಾಕ್ʼಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು

ಬೆಂಗಳೂರು:  ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಿಹಾರ ಮೂಲದ ಸಿದ್ಧಾರ್ಥ್(30)​ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ವೈಟ್​​ಫೀಲ್ಡ್​ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮೆಟ್ರೋ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದ್ದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದುಕೊಂಡು ಹೋಗಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಸಿದ್ದಾರ್ಥ ನನ್ನು ಜ್ಞಾನಭಾರತಿ ಸ್ಟೇಷನ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ಮಾಡುತ್ತಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow