ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ ಮುಸ್ಲೀಮರ ವಿರುದ್ಧ: ಕೆಎಸ್ ಈಶ್ವರಪ್ಪ

ಹುಬ್ಬಳ್ಳಿ: ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ ಮುಸ್ಲೀಮರ ವಿರುದ್ಧವಾಗಿರುತ್ತದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಎಲ್ಲ ಜಾತಿಯವರನ್ನು ಸೇರಿಸಿ ಮೊದಲ ಸಭೆ ಮಾಡಿದ್ದೇವೆ. ಎಲ್ಲ ರಾಜಕೀಯ ಪಕ್ಷದವರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅನೇಕ ಸಲಹೆ ಬಂದಿವೆ. ಸಾಧು-ಸಂತರು ಕೂಡ ಸಲಹೆ ಕೊಟ್ಡಿದ್ದಾರೆ.
ಅವರ ಸಲಹೆಗೆ ನಾವು ಒಪ್ಪಿದ್ದೇವೆ. ಬಾಗಲಕೋಟೆ ಚರಂತಿ ಮಠ ಸಮುದಾಯ ಭವನದಲ್ಲಿ ಅಕ್ಟೋಬರ್ 20 ರಂದು ಕಾರ್ಯಕ್ರಮ ನಡೆಯಲಿದೆ. 30 ರಿಂದ 40 ಜನ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಬಾಗಲಕೋಟೆ ಸಭೆ ಬಳಿಕ ಅಂತೀಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸಮಾಜದಲ್ಲಿ ಎಲ್ಲರಿಗೂ ಅನ್ಯಾಯ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ ಮುಸ್ಲೀಮರ ವಿರುದ್ಧವಾಗಿರುತ್ತದೆ ಎಂದರು.
ನಾನು ರಾಯಣ್ಣ ಬ್ರಿಗೇಡ್ ಕಟ್ಟಿದಾಗ, ಜನ ಬೆಂಬಲ ಸಿಕ್ಕಿತ್ತು. ಆದರೆ, ಬಿಎಸ್ ಯಡಿಯೂರಪ್ಪ ಅವರಿಗೆ ಸಹಿಸಿಕೊಳ್ಳಲು ಆಗದೆ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ದೂರು ಕೊಡಲು ಕಾರಣವೇನು ಎಂದು ಬಿಎಸ್ ಯಡಿಯೂರಪ್ಪ ಅವರು ಕಾರಣ ಹೇಳಿಲ್ಲ. ಸಂಘಟನೆ ಬೇಡಾ ಅಂತ ಮಾತ್ರ ಹೇಳಿದರು. ನಾನು ಪ್ರಾರ್ಥನೆ ಮಾಡಿದರೂ ಬಿಎಸ್ ಯಡಿಯೂರಪ್ಪ ಕೇಳಲಿಲ್ಲ. ಅವತ್ತು ನಾನು ತಪ್ಪು ಮಾಡಿದೆ. ರಾಯಣ್ಣ ಬ್ರಿಗೇಡ್ ಇರಬೇಕಿತ್ತು ಎಂದು ಹೇಳಿದರು.
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






