ನಮ್ಮ ಸರ್ಕಾರವನ್ನು ಯಾರಿಂದಲೂ ಬೀಳಿಸಲು ಸಾಧ್ಯವಿಲ್ಲ: ಸಚಿವ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಕುರಿತು ಹೈಕಮಾಂಡ್ ತೀರ್ಮಾನ ಮಾಡಲಿದೆ. ಸದ್ಯಕ್ಕೆ ಎಲ್ಲ ಸಚಿವರ ರಿಪೋರ್ಟ್ ಕಾರ್ಡ್ ಕೇಳಿದ್ದಾರೆ. ನಾನೂ ಕೂಡ ನನ್ನ ರಿಪೋರ್ಟ್ ಕಾರ್ಡ್ ನೀಡಿರುವೆ. ಯಾರನ್ನು ಉಳಿಸಿಕೊಳ್ಳಬೇಕು, ಮುಂದುವರಿಸಬೇಕು ಹೈಕಮಾಂಡ್ ತೀರ್ಮಾನಿಸಲಿದೆ. ಗುಲಾಂ ನಬಿ ಅಜಾದ್ ಇದ್ದಾಗ ಕೂಡ ವರದಿ ನೀಡುತ್ತಿದ್ದೆವು. ಅದೇ ರೀತಿ ವರದಿ ಕೇಳಿದ್ದಾರಷ್ಟೆ ಎಂದರು. ಇದೇ ವೇಳೆ, ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮ ವಿಚಾರ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಅಧ್ಯಕ್ಷರು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ. ಅದು ಅವರ ಅಧಿಕಾರ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






