ನಾನು ಸಿಎಂ ಆಕಾಂಕ್ಷಿ ಅಷ್ಟೆ, ನಾನೇ ಆಗ್ತೇನೆ ಅಂತ ಹೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ನಾನು ಸಿಎಂ ಆಕಾಂಕ್ಷಿ ಅಷ್ಟೆ, ನಾನೇ ಆಗ್ತೇನೆ ಅಂತ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ 2028ಗೆ ಸತೀಶ್ ಜಾರಕಿಹೊಳಿ ಸಿಎಂ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಾನು ಈಗ ಕ್ಲೇಮ್ ಮಾಡ್ತಿಲ್ಲ. 2028ಕ್ಕೆ ಸಿಎಂ ಅಂತ ಹೇಳಿದ್ದೇನೆ. ಮೊದಲಿನಿಂದಲೂ ಹೇಳ್ತಿದ್ದೇನೆ. ಆಗ ನಾನೇ ಸಿಎಂ ಅಂತ ಕ್ಲೇಮ್ ಮಾಡ್ತಿಲ್ಲ. ನಾನು ಸಿಎಂ ಆಕಾಂಕ್ಷಿ ಅಂತ ಅಷ್ಟೇ ಹೇಳ್ತಿರೋದು. ನನ್ನಂತೆ ಆಕಾಂಕ್ಷಿಗಳು ಇರ್ತಾರೆ. ನಾನೇ ಆಗ್ತೇನೆ ಅಂತ ಏನೂ ಹೇಳ್ತಿಲ್ಲ. ಅಲ್ಲಿಯವರೆಗೆ ಈ ಹುದ್ದೆ ಆಕಾಂಕ್ಷಿ ನಾನಲ್ಲ ಎಂದು ಹೇಳಿದರು.
ಇನ್ನೂ ಸಿಎಂ ಕುರ್ಚಿ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಅದನ್ನು ಹೈಕಮಾಂಡ್ ನಿರ್ಧರಿಸುತ್ತೆ. ಒಪ್ಪಂದ ದೆಹಲಿಯಲ್ಲೇ ಆಗಿರಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಹೈಕಮಾಂಡ್ ಮಟ್ಟದಲ್ಲಿ ನಡೆದಿರಬಹುದು. ಅವರಿಗಷ್ಟೇ ಗೊತ್ತು, ನಮಗೆ ಗೊತ್ತಿಲ್ಲ. ನಾನು ಮೊದಲೇ ಅದನ್ನು ಹೇಳಿದ್ದೆನ್ನಲ್ಲ. ಡಿ.ಕೆ. ಸುರೇಶ್ ಸಹ 5 ವರ್ಷ ಅವರೇ ಇರ್ತಾರೆ ಅಂದ್ರಲ್ಲ. ಅದಕ್ಕೆ ಅವರ ಆಪ್ತರು ಹೇಳ್ತಾರೆ. ಸಿಎಂ ವಿಚಾರದ ಒಪ್ಪಂದದ ಬಗ್ಗೆ ಗೊತ್ತಿಲ್ಲ ಎಂದರು
ನಿಮ್ಮ ಪ್ರತಿಕ್ರಿಯೆ ಏನು?






