ನಿರಂತರ ಮಾತುಕತೆಗಳ ಕಾಲ ಮುಗಿದಿದೆ: ಪಾಕಿಸ್ತಾನಕ್ಕೆ ಎಸ್ ಜೈಶಂಕರ್ ಕಠಿಣ ಎಚ್ಚರಿಕೆ

ನಿರಂತರ ಮಾತುಕತೆಗಳ ಕಾಲ ಮುಗಿದಿದೆ: ಪಾಕಿಸ್ತಾನಕ್ಕೆ ಎಸ್ ಜೈಶಂಕರ್ ಕಠಿಣ ಎಚ್ಚರಿಕೆ
''ಪಾಕಿಸ್ತಾನ ಜತೆ ಸಂಬಂಧ ಸುಧಾರಣೆಗೆ ನಿರಂತರ ಸೌಹಾರ್ದಯುತ ಮಾತುಕತೆ ನಡೆಸುವ ಯುಗ ಮುಗಿದು ಹೋಗಿದೆ. ಇನ್ನೇನಿದ್ದರೂ ಕಠಿಣ ಕ್ರಮಗಳ ಮೂಲಕ ಉತ್ತರ ನೀಡಬೇಕಾದ ಸಮಯ ಬಂದಿದೆ,'' ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತೀಕ್ಷ್ಣವಾಗಿ ಹೇಳಿದ್ದಾರೆ.
ದಿಲ್ಲಿಯಲ್ಲಿ ಶುಕ್ರವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಸ್ ಜೈಶಂಕರ್, ''ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ನಮ್ಮ ಸರಕಾರ 370ನೇ ವಿಧಿ ರದ್ದು ಮಾಡಿದೆ. ಜನರ ಇಚ್ಚೆಯಂತೆ ಚುನಾವಣೆ ನಡೆಸಲಾಗುತ್ತಿದೆ. ನಾವು ಮೌನವಾಗಿರುವುದು ನಮ್ಮ ದೌರ್ಬಲ್ಯವಲ್ಲ. ನಮ್ಮ ಭೂಭಾಗದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಶಕ್ತಿ ನಮಗಿದೆ. ಈ ಹಂತದಲ್ಲಿ ಪಾಕಿಸ್ತಾನದ ಜತೆ ಯಾವ ರೀತಿ ಸಂಬಂಧ ಬೆಳೆಸಬೇಕು ಎಂಬುದನ್ನು ಆಲೋಚಿಸಬೇಕಾದ ಅಗತ್ಯವಿದೆ,'' ಎಂದು ಹೇಳಿದರು.
ಶಾಂಘೈ ಸಹಕಾರ ಒಕ್ಕೂಟದ ಶೃಂಗಸಭೆಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪಾಕಿಸ್ತಾನ ಆಹ್ವಾನ ನೀಡಿದ ಹೊತ್ತಲ್ಲೇ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆ ಉಭಯ ದೇಶಗಳ ನಡುವಿನ ಸಂಬಂಧ ಮರಳಿ ಹಳಿಗೆ ಬರುವುದು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದೆ.
ಶಾಂಘೈ ಸಹಕಾರ ಒಕ್ಕೂಟದ ಶೃಂಗಸಭೆಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪಾಕಿಸ್ತಾನ ಆಹ್ವಾನ ನೀಡಿದ ಹೊತ್ತಲ್ಲೇ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆ ಉಭಯ ದೇಶಗಳ ನಡುವಿನ ಸಂಬಂಧ ಮರಳಿ ಹಳಿಗೆ ಬರುವುದು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದೆ.
''ಜಗತ್ತಿನ ಎಲ್ಲ ರಾಷ್ಟ್ರಗಳಂತೆ ಭಾರತವೂ ನೆರೆ ಹೊರೆ ದೇಶಗಳ ಸವಾಲು ಎದುರಿಸುತ್ತಿದೆ. ಬಾಂಗ್ಲಾದೇಶ, ಮಾಲ್ಡೀವ್ಸ್ನಲ್ಲಿ ಬದಲಾದ ರಾಜಕೀಯ ಸನ್ನಿವೇಶಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಎಲ್ಲ ವಿಚಾರಗಳನ್ನು ರಾಜತಾಂತ್ರಿಕವಾಗಿಯೇ ನಿರ್ವಹಣೆ ಮಾಡಲಾಗುವುದು,'' ಎಂದು ಜೈಶಂಕರ್ ಹೇಳಿದರು.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






