ನೂರಾರು ಲೀಟರ್ ಹಾಲು ಮಣ್ಣುಪಾಲು: ಅಯ್ಯೋ ಮಂಡ್ಯ ಮಹಿಳೆಯರಿಗೆ ಇದೇನಾಯ್ತು!

ಮಂಡ್ಯ:- ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕಾಡಅಂಕನಹಳ್ಳಿ ಗ್ರಾಮದಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಾಲು ಉತ್ಪಾದಕರು ಹತ್ತಾರು ಲೀಟರ್ ಹಾಲನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಟ್ಟೆ ಸೇರಬೇಕಿದ್ದ ನೂರಾರು ಲೀಟರ್ ಹಾಲು ಮಣ್ಣು ಪಾಲಾಗಿದೆ.
ಹಾಲು ಖರೀದಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಮಹಿಳೆಯರು ಸಿಡಿದೆದ್ದಿದ್ದು, ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಈ ಮೂಲಕ ಹೊಟ್ಟೆ ಸೇರಬೇಕಿದ್ದ ನೂರಾರು ಲೀಟರ್ ಹಾಲು ಮಣ್ಣು ಪಾಲಾಗಿದೆ. ಕೃಷಿ ಸಚಿವರ ಕ್ಷೇತ್ರದಲ್ಲೆ ಕೃಷಿಕರ ಬದುಕು ಮೂರಾಬಟ್ಟೆ ಆಗಿದ್ದು, ಈ ಎಲ್ಲಾ ದೃಶ್ಯ ಜಲ್ಲೆಯ ನಾಗಮಂಗಲ ತಾಲ್ಲೂಕಿನ ಕಾಡಂಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹಾಲು ಖರೀದಿಸದಂತೆ ಮನ್ಮುಲ್ ಗೆ ಚಲುವರಾಯಸ್ವಾಮಿ ಅವರು ಸೂಚನೆ ಕೊಟ್ಟಿದ್ದಾರೆ ಎಂದು ಆರೋಪಿಸಿರುವ ಮಹಿಳೆಯರು, ಸಚಿವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಸಚಿವರು ದ್ವೇಷದಿಂದ ಹಾಲು ಖರೀದಿಸದಂತೆ ಮನ್ಮುಲ್ ಗೆ ಸೂಚನೆ ಆರೋಪ ಕೇಳಿ ಬಂದಿದ್ದು, ಇಂದು ಹಾಲು ಖರೀದಿಸದ ಹಿನ್ನೆಲೆ, ರಸ್ತೆಗೆ ಹಾಲು ಚೆಲ್ಲಿ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ.
ಇದೇ ವೇಳೆ ಹಾಲು ಖರೀದಿಸದ ಹಿನ್ನೆಲೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಸಚಿವರು ದ್ವೇಷದಿಂದ ಹಾಲು ಖರೀದಿಸದಂತೆ ಮನ್ಮುಲ್ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಡೈರಿಯಲ್ಲಿ ಹಾಲು ಖರೀದಿಸಿಲ್ಲ ಎಂದು ಆರೋಪಿಸಿದ ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






