ಪಂಚಮಸಾಲಿ ಮೀಸಲಾತಿಗಾಗಿ ಡಿ.10ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ: ಶಾಸಕ ಯತ್ನಾಳ್

ಡಿಸೆಂಬರ್ 8, 2024 - 13:58
 0  38
ಪಂಚಮಸಾಲಿ ಮೀಸಲಾತಿಗಾಗಿ ಡಿ.10ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ: ಶಾಸಕ ಯತ್ನಾಳ್

ಬೆಳಗಾವಿ: ಪಂಚಮಸಾಲಿ ಮೀಸಲಾತಿಗಾಗಿ ಡಿ.10ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿಗಾಗಿ ಡಿ.10ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಸಮಾಜದವರನ್ನ ಕರೆದು ಮಾತಾಡುವ ಕೆಲಸ ಮಾಡುತ್ತಿಲ್ಲ.

ಎಲ್ಲಾ ಪೊಲೀಸ್ ಠಾಣೆಗಳಿಗೆ ಸರ್ಕಾರ ಸೂಚನೆ ನೀಡಿದೆ.  ಆರೂವರೆ ಸಾವಿರ ಪೊಲೀಸರನ್ನ ನಿಯೋಜನೆ ಮಾಡಿದ್ದೀರಿ. ಮನಸ್ಸು ಮಾಡಿದ್ರೆ 15 ನಿಮಿಷದಲ್ಲಿ ಹಿಂದುಳಿದ ಆಯೋಗದ ವರದಿ ತರಿಸಿಕೊಳ್ತೇವೆ ಅಂದಿದ್ರಿ. ಬೆಳಗಾವಿ ಅಧಿವೇಶನಕ್ಕೂ ಮುನ್ನ ವರದಿ ತರೆಸಿಕೊಂಡು ಅಧಿಸೂಚನೆ ಹೊರಡಿಸಿದ್ರೆ ನಿಲ್ಲಿಸ್ತೇವೆ. ಮೀಸಲಾತಿ ಕೊಡಬಾರದು ಅಂತಿದ್ರೆ ಹೋರಾಟ ಅನಿವಾರ್ಯ ಎಂದು ಕಿಡಿಕಾರಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow