ಪಂಚೆ ಉಡ್ಕೊಂಡೇ ಟ್ರೋಫಿ ಎತ್ತಿದ ಹನುಮಂತು..! ಹಾಗಾದ್ರೆ ಬಿಗ್ ಬಾಸ್ ವಿನ್ನರ್ʼಗೆ 50 ಲಕ್ಷದಲ್ಲಿ ಸಿಗೋ ಹಣ ಎಷ್ಟು ಗೊತ್ತಾ..?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬರೋಬ್ಬರಿ 5 ಕೋಟಿ ವೋಟ್ ಪಡೆದು ಹನುಮಂತ ಅವರು ಗೆದ್ದು ಬೀಗಿದ್ದಾರೆ. ಸೀಸನ್ ಶುರುವಾಗಿ 50 ದಿನಗಳೇ ಉರುಳಿದ್ಮೇಲೆ 18ನೇ ಸ್ಪರ್ಧಿಯಾಗಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟು ಹನುಮಂತ ಶಾಕ್ ನೀಡಿದ್ದರು. ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಗೆದ್ದ ಮೊದಲ ಸ್ಪರ್ಧಿ ಹನುಮಂತ ಆಗಿದ್ದಾರೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಅವರಿಂದ ಇತಿಹಾಸವೇ ಸೃಷ್ಟಿ ಆಗಿದೆ.
ಈ ಬಾರಿಯ ಬಿಗ್ ಬಾಸ್ನಲ್ಲಿ ಒಟ್ಟೂ 20 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರಲ್ಲಿ 19 ಜನರನ್ನು ಹಿಂದಿಕ್ಕಿ ಹನುಮಂತ ಅವರು ಕಪ್ನ ಒಲಿಸಿಕೊಂಡಿದ್ದಾರೆ. ಜವಾರಿ ಹುಡುಗನಾಗಿ, ಜವಾರಿ ಹಾಡುಗಳನ್ನು ಹಾಡುತ್ತಾ ಗಮನ ಸೆಳೆದರು. ಯಾರೇ ನಾಮಿನೇಟ್ ಮಾಡಲಿ, ಯಾರು ಏನೇ ಕಾರಣ ಕೊಡಲಿ, ಅವರನ್ನು ಕಳಪೆಗೆ ಹಾಕಲಿ ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳದೆ ಆಡಿದರು. ಅದಕ್ಕೆ ಕೊನೆಗೂ ಜಯ ಸಿಕ್ಕಂತೆ ಆಗಿದೆ. ‘ಒಳ್ಳೆಯತನಕ್ಕೆ ಜಯ ಇದೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ.
ಇನ್ನೂ ಬಿಗ್ ಬಾಸ್ ಬಹುಮಾನ ಮೊತ್ತವಾಗಿ ಬರೋಬ್ಬರಿ 50 ಲಕ್ಷ ರೂಪಾಯಿ ಸಿಕ್ಕಿದೆ. ಆದರೆ, ಇದರಲ್ಲಿ ಸಂಪೂರ್ಣ ಮೊತ್ತ ಅವರಿಗೆ ಸಿಗೋದಿಲ್ಲ.
‘ಬಿಗ್ ಬಾಸ್ ಕನ್ನಡ’ ದೊಡ್ಡ ಮಟ್ಟದ ಜನಪ್ರಿಯತೆ ಸಿಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ 50 ಲಕ್ಷ ರೂಪಾಯಿ ಸಿಗುತ್ತದೆ. ಆದರೆ, ಈ ಹಣ ಸಂಪೂರ್ಣವಾಗಿ ಗೆದ್ದ ವ್ಯಕ್ತಿಗೆ ಸಿಗುವುದಿಲ್ಲ ಎಂಬುದು ಅನೇಕರಿಗೆ ಗೊತ್ತಿಲ್ಲ. ಹೌದು, ಬಿಗ್ ಬಾಸ್ ಗೆದ್ದ ಹಣಕ್ಕೆ ಸರ್ಕಾರ ದೊಡ್ಡ ಮೊತ್ತದ ಟ್ಯಾಕ್ಸ್ ಹೇರುತ್ತದೆ.
ಎಷ್ಟು ತೆರಿಗೆ?
ಬಹುಮಾನ ಮೊತ್ತಕ್ಕೆ ಸರ್ಕಾರ ಬರೋಬ್ಬರಿ ಶೇ. 30ರಷ್ಟು ಟ್ಯಾಕ್ಸ್ ವಿಧಿಸುತ್ತದೆ. ಬರುವ ಒಟ್ಟೂ ಹಣದಲ್ಲಿ ಶೇ. 30 ಹಣ ಸರ್ಕಾರಕ್ಕೆ ಕೊಡಲೇಬೇಕಿದೆ. ಈ ಹಣವನ್ನು ಸಂಸ್ಥೆಯವರು ಕಡಿತ ಮಾಡಿಯೇ ವಿಜೇತರಿಗೆ ನೀಡುತ್ತಾರೆ. ಹೀಗಾಗಿ ಹನುಮಂತಗೆ ಸಿಗೋದು ಕೇವಲ 35 ಲಕ್ಷ ರೂಪಾಯಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಟಿವಿ ರಿಯಾಲಿಟಿ ಶೋ, ಲಾಟರಿ, ಸ್ಪರ್ಧೆ, ಕಾರ್ಡ್ ಗೇಮ್ನಲ್ಲಿ ಆಡಿ ಗೆದ್ದಲ್ಲಿ ಶೇ. 30 ತೆರಿಗೆ ಪಾವತಿಸಬೇಕು. ಕನಿಷ್ಠ 10 ಸಾವಿರ ರೂಪಾಯಿ ಇಂದ ಈ ತೆರಿಗೆ ಅನ್ವಯ ಆಗುತ್ತದೆ.
ಉಳಿದ ಸ್ಪರ್ಧಿಗಳಿಗೂ
ಕೇವಲ ಹನುಮಂತ ಮಾತ್ರವಲ್ಲದೆ ರನ್ನರ್ ಅಪ್ ಆದ ತ್ರಿವಿಕ್ರಂ ಅವರೂ ತೆರಿಗೆ ಹಣ ಪಾವತಿಸಬೇಕು. ಅವರಿಗೆ ಒಟ್ಟೂ 15 ಲಕ್ಷ ರೂಪಾಯಿ ಸಿಕ್ಕಿದ್ದು, ಇದರಲ್ಲಿ ಅವರಿಗೆ 10,50,000 ಮಾತ್ರ ಸಿಗಲಿದೆ. ಉಳಿದ ಮೊತ್ತ ತೆರಿಗೆ ರೂಪದಲ್ಲಿ ಸರ್ಕಾರದ ಕೈ ಸೇರಲಿದೆ. ಇನ್ನು, ರಜತ್ ಅವರಿಗೆ 10 ಲಕ್ಷ ರೂಪಾಯಿ ಸಿಕ್ಕಿದ್ದು, ಅವರ ಕೈ ಸೇರೋದು 7 ಲಕ್ಷ ರೂಪಾಯಿ ಮಾತ್ರ.
ನಿಮ್ಮ ಪ್ರತಿಕ್ರಿಯೆ ಏನು?






