ಪತಿ ಆಸರೆಯಾಗಿ ನಿಂತ ವಿಜಯಲಕ್ಷ್ಮಿ.. ಜೋಡಿ ಫೋಟೋ ನೋಡಿ ವಾವ್ ಎಂದ ಫ್ಯಾನ್ಸ್!

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆದ ಬಳಿಕ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಕಷ್ಟು ಸಂಕಟಪಟ್ಟರು. ಪತಿಯನ್ನು ಹೊರಕ್ಕೆ ಕರೆದುಕೊಂಡು ಬರಲು ಸಾಕಷ್ಟು ಹರಸಾಹಸಪಟ್ಟರು. ಕೊನೆಗೂ ಅವರ ಪ್ರಯತ್ನ ಫಲ ಕೊಟ್ಟಿತು. ದರ್ಶನ್ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ.ಈಗ ಅವರು ಪತ್ನಿಯ ಜೊತೆಯೇ ಇರುತ್ತಿದ್ದಾರೆ. ಅವರ ಜೊತೆಯೇ ಸುತ್ತಾಡುತ್ತಿದ್ದಾರೆ. ಇದರಿಂದ ವಿಜಯಲಕ್ಷ್ಮೀ ಕೂಡ ಖುಷಿಯಾಗಿದ್ದಾರೆ. ಇತ್ತೀಚೆಗೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ಒಟ್ಟಾಗಿ ಕಾರ್ಯಕ್ರಮ ಒಂದರಲ್ಲಿ ಕಾಣಿಸಿಕೊಂಡಿದ್ದರು.
ಇದೀಗ ಪತಿ ಜೊತೆಗಿನ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಜೋಡಿಯ ಫೋಟೋ ನೋಡಿ ಫ್ಯಾನ್ಸ್ ವಾವ್ ಎಂದಿದ್ದಾರೆ. ದರ್ಶನ್ ಜೊತೆಗಿನ ವಿಶೇಷ ಫೋಟೋವೊಂದನ್ನು ವಿಜಯಲಕ್ಷ್ಮಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಅದರಲ್ಲಿ ನೆಚ್ಚಿನ ಕುದುರೆ ಜೊತೆ ದರ್ಶನ್ ದಂಪತಿ ಖುಷಿಯಿಂದ ಪೋಸ್ ನೀಡಿದ್ದಾರೆ. ಈ ಫೋಟೋ ಈಗ ನಟನ ಫ್ಯಾನ್ಸ್ ಪೇಜ್ಗಳಲ್ಲಿ ವೈರಲ್ ಆಗ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






