ಪತ್ನಿ ಪತ್ರ ಬರೆದಿದ್ದು ಗೊತ್ತಿದ್ದೂ ಗೊತ್ತಿಲ್ಲವೆಂದು ರಾಜ್ಯಪಾಲರಿಗೆ ಉತ್ತರಿಸಿದ ಸಿದ್ದರಾಮಯ್ಯ.!

ಪತ್ನಿ ಪತ್ರ ಬರೆದಿದ್ದು ಗೊತ್ತಿದ್ದೂ ಗೊತ್ತಿಲ್ಲವೆಂದು ರಾಜ್ಯಪಾಲರಿಗೆ ಉತ್ತರಿಸಿದ ಸಿದ್ದರಾಮಯ್ಯ.!
ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ನನ್ನ ಪತ್ನಿ ಮುಡಾಗೆ ಯಾವ ಪತ್ರವನ್ನೂ ಬರೆದಿಲ್ಲ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. 23-06-2014ರಲ್ಲಿ ಮುಡಾಗೆ ಸಿಎಂ ಪತ್ನಿ ಪಾರ್ವತಿ 3.16 ಗುಂಟೆ ಜಮೀನಿಗೆ ಬದಲಿ ಜಾಗ ಕೇಳಿ ಬರೆದಿರುವ ಅರ್ಜಿಯ ಸಂಪೂರ್ಣ ಮಾಹಿತಿಯ ಬಗ್ಗೆ ಸಿಎಂಗೆ ಗೊತ್ತಿದ್ರೂ, ನನ್ನ ಪತ್ನಿ ಪತ್ರ ಬರೆದಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ನೀಡಿದ್ದರು. ಈ ನೋಟಿಸ್ಗೆ ಉತ್ತರಿಸಿದ ಸಿದ್ದರಾಮಯ್ಯನವರು, ತಮ್ಮ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದ ಬಗ್ಗೆ ಉಲ್ಲೇಖ ಮಾಡಿದ್ದಾರೆ. 30ನೇ ಖಂಡಿಕೆ 15ನೇ ಅನೆಕ್ಸರ್ ನಲ್ಲಿ ತಮ್ಮ ಪತ್ನಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
23-06-2014ರಲ್ಲಿ ಮುಡಾಗೆ ಸಿಎಂ ಪತ್ನಿ ಪಾರ್ವತಿ 3.16 ಗುಂಟೆ ಜಮೀನಿಗೆ ಬದಲಿ ಜಾಗ ಕೇಳಿ ಬರೆದಿರುವ ಅರ್ಜಿಯ ಸಂಪೂರ್ಣ ಮಾಹಿತಿಯ ಬಗ್ಗೆ ಸಿಎಂಗೆ ಗೊತ್ತಿದ್ರೂ, ನನ್ನ ಪತ್ನಿ ಪತ್ರ ಬರೆದಿಲ್ಲ ಎಂದು ಉಲ್ಲೇಖಿಸಿದ್ದಾರೆ. ನನ್ನ ಪತ್ನಿ ಮುಡಾಗೆ ಯಾವ ಪತ್ರವನ್ನ ಬರೆದಿಲ್ಲ ಎಂದು ತಿಳಿಸಿದ್ದು ಸಿಎಂಗೆ ಸಂಕಷ್ಟ ಕಾದಿದ್ಯಾ ಎನ್ನಲಾಗುತ್ತಿದೆ. ಪತ್ನಿ ಮುಡಾಗೆ ಬರೆದ ಪತ್ರದ ಬಗ್ಗೆ ಗೊತ್ತಿಲ್ಲ ಎಂದು ಸಿಎಂ ಸುಳ್ಳು ಹೇಳಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






