ಪತ್ನಿಯನ್ನು ಕೊಂದು ಚರಂಡಿಗೆ ಎಸೆದ ಪತಿರಾಯ.! ಮೂಗುತಿಯಿಂದ ಕೊಲೆಯ ರಹಸ್ಯ ಬಯಲು!

ನವದೆಹಲಿ: ಮಹಿಳೆಯನ್ನು ಕೊಂದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳ ಬಳಿಕ ಕೊಲೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೀಮಾ ಸಿಂಗ್ (47) ಮೃತ ದುರ್ಧೈವಿಯಾಗಿದ್ದು, ಮಹಿಳೆಯ ಮೃತದೇಹ ಚರಂಡಿಯೊಂದರಲ್ಲಿ ಪತ್ತೆಯಾಗಿತ್ತು. ಆದರೆ ಪತ್ತೆಯಾಗಿ 15 ದಿನ ಕಳೆದರೂ ಆಕೆಯ ಗುರುತು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ತನಿಖಾಧಿಕಾರಿಗಳು ಆಕೆ ಹಾಕಿಕೊಂಡಿದ್ದ ಮೂಗುತಿಯ ಆಧಾರದ ಮೇಲೆ ತನಿಖೆ ಆರಂಭಿಸಿದ್ದರು.
ಅಧಿಕಾರಿಗಳು ಮೂಗುತಿ ಖರೀದಿಸಿದ್ದ ಅಂಗಡಿಯನ್ನು ಪತ್ತೆ ಹಚ್ಚಿ, ಖರೀದಿದಾರರ ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ಮಾಹಿತಿಯನ್ನು ಪಡೆದುಕೊಂಡರು. ಇದರಿಂದ ಸಂಪರ್ಕಕ್ಕೆ ಸಿಕ್ಕ ದೆಹಲಿ ಉದ್ಯಮಿಯನ್ನು ವಿಚಾರಿಸಿದಾಗ ನನ್ನ ಪತ್ನಿ ವೃಂದಾವನಕ್ಕೆ ಹೋಗಿರುವುದಾಗಿ ತಿಳಿಸಿದ್ದಾನೆ.
ಹೆಚ್ಚಿನ ತನಿಖೆಗಾಗಿ ವಿಚಾರಣೆಗೊಳಪಡಿಸಿದಾಗ ಉದ್ಯಮಿ ತಪ್ಪೊಪ್ಪಿಕೊಂಡಿದ್ದು, ತನ್ನ ಪತ್ನಿಯನ್ನು ಭದ್ರತಾ ಸಿಬ್ಬಂದಿಯ ಸಹಾಯದಿಂದ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಹಾಗೂ ನಮ್ಮಿಬ್ಬರ ಸಂಬಂಧದಲ್ಲಿ ತುಂಬಾ ಭಿನ್ನಾಭಿಪ್ರಾಯಗಳಿದ್ದ ಕಾರಣ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಸದ್ಯ ಪೊಲೀಸರು ಪತಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






