ಪತ್ನಿಯನ್ನು ಪೀಸ್ ಪೀಸ್ ಮಾಡಿ ಸೂಟ್ ಕೇಸ್ʼಗೆ ತುಂಬಿದ್ದ ಟೆಕ್ಕಿ..! ಎಸ್ಕೇಪ್ ಆಗಿದ್ದ ಹಂತಕ ಮಹಾರಾಷ್ಟ್ರದಲ್ಲಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ ನಡೆದಿದೆ. ಪತಿಯನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿ ಸೂಟ್ ಕೇಸ್ನಲ್ಲಿ ತುಂಬಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೆಕರ್(32) ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು ಪೊಲೀಸರು ಮನೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ ದೊಡ್ಡಕಮ್ಮನಹಳ್ಳಿ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು.
ಆದ್ರೆ, ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದ್ರೆ, ಏಕೆ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿದಲ್ಲ. ಇದೀಗ ಹುಳಿಮಾವು ದೊಡ್ಡಕಮ್ಮನಹಳ್ಳಿಯ ಮನೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಪತಿ ರಾಕೇಶ್ ಪತ್ನಿ ಗೌರಿಯನ್ನು ಕೊಂದು ಬಳಿಕ ಆಕೆಯ ಮೃತದೇಹವನ್ನು ತುಂಡರಿಸಿ ಸೂಟ್ಕೇಸ್ಗೆ ತುಂಬಿಟ್ಟಿದ್ದಾನೆ. ಬಳಿಕ ರಾಕೇಶ್, ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ತಿಳಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ರಾಕೇಶ್ ಕೃತ್ಯವನ್ನು ತಿಳಿಸಿದ್ದಾರೆ. ಕೂಡಲೇ ಮಹಾರಾಷ್ಟ್ರ ಪೊಲೀಸರು ಹುಳಿಮಾವು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಈ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಆರೋಪಿಯ ಸಿಡಿಆರ್ ಜಾಡು ಹಿಡಿದ ಪೊಲೀಸರು ಪುಣೆಯ ಶಿರವಾಲ್ ಪೊಲೀಸರು ಬಂಧಿಸಿದ್ದಾರೆ. ಹುಳಿಮಾವು ಪೊಲೀಸ್ರು ಪುಣೆ ರೀಚ್ ಆಗಿದ್ದು, ಆರೋಪಿಯನ್ನ ಕರೆತರ್ತಿದ್ದಾರೆ. ಇನ್ನು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ಗೌರಿ ಪೋಷಕರಿಗೆ ವಿಚಾರ ಮುಟ್ಟಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






