ಪರಪ್ಪನ ಅಗ್ರಹಾರದಲ್ಲಿರುವ BJP MLA ಗೆ ಮತ್ತೊಂದು ಸಂಕಷ್ಟ: ಕಾಮಗಾರಿ ಬಗ್ಗೆ ತನಿಖೆಗೆ ಆದೇಶ!

ಸೆಪ್ಟೆಂಬರ್ 25, 2024 - 12:01
 0  9
ಪರಪ್ಪನ ಅಗ್ರಹಾರದಲ್ಲಿರುವ BJP MLA ಗೆ ಮತ್ತೊಂದು ಸಂಕಷ್ಟ: ಕಾಮಗಾರಿ ಬಗ್ಗೆ ತನಿಖೆಗೆ ಆದೇಶ!

ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕ್ಷೇತ್ರದ ಕಾಮಗಾರಿಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.  2020 ಸೆಪ್ಟೆಂಬರ್​​ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.

ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಇದೀಗ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್ 23 ರಂದೇ ತನಿಖೆಗೆ ಆದೇಶ ಹೊರಡಿಸಿದ್ದರು. ಅದರ ಆಧಾರದಲ್ಲಿ ಸಮಿತಿ ರಚನೆ ಮಾಡಲಾಗಿದೆ.  ತನಿಖಾ ಸಮಿತಿಯಲ್ಲಿ ಯೋಜನೆ ವಿಶೇಷ, ಹಣಕಾಸು ವಿಶೇಷ ಆಯುಕ್ತರು, ಕ್ವಾಲಿಟಿ ಚೆಕ್ ಚೀಫ್ ಇಂಜಿನಿಯರ್ ಹಾಗೂ ಟಿವಿಸಿಸಿ ಚೀಫ್ ಇಂಜಿನಿಯರ್ ಒಳಗೊಂಡಿದ್ದಾರೆ.

ವೆಬ್ ಡೆಸ್ಕ್

ಫೋಕಸ್ ಕರ್ನಾಟಕ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow