ಪಾಕ್ ನಿಂದ ಭಾರತದ ಸೈನಿಕರಿಗಾಗಲಿ, ಜನರಿಗಾಗಲಿ ತೊಂದರೆ ಆಗಬಾರದು: ಮಲ್ಲಿಕಾರ್ಜುನ ಖರ್ಗೆ!

ಬೆಂಗಳೂರು:- ಪಾಕಿಸ್ತಾನವನ್ನು ಹತೋಟಿಯಲ್ಲಿಡಲು ಪ್ರಧಾನಿಗೆ ಬೆಂಬಲ ಕೊಡಲಾಗುತ್ತದೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯಲ್ಲಿ ಭಾರತ ದೇಶದ ಸೈನಿಕರಿಗಾಗಲಿ, ಜನರಿಗಾಗಲಿ ತೊಂದರೆ ಆಗಬಾರದು. ಪಾಕಿಸ್ತಾನವನ್ನ ಹತೋಟಿಯಲ್ಲಿ ಇಡಲು ನಾವು ಪ್ರಧಾನಿಗೆ ಬೆಂಬಲ ಕೊಟ್ಟಿದ್ದೇವೆ.
ಈಗಾಗಲೇ ನಾವು ಅವರಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದೇವೆ. ಜನರ ಅನಿಸಿಕೆ ಹಾಗೂ ದೇಶದಲ್ಲಿ ಇರುವ ಭಾವನೆ ಜೊತೆಗೆ ಎಲ್ಲಾ ಪಕ್ಷಗಳು ಅವರಿಗೆ ಅಧಿಕಾರ ನೀಡಿದ್ದೇವೆ. ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ಅಧಿಕಾರ ಮಾಡಲು ಕೊಟ್ಟಿದ್ದೇವೆ. ಅದನ್ನು ಅವರು ಉಪಯೋಗ ಮಾಡಿಕೊಳ್ಳಲಿ, ತಮ್ಮ ಕೆಲಸವನ್ನು ಅವರು ಮಾಡಲಿ. ದೇಶದ ರಕ್ಷಣೆ ಮಾಡುವುದಕ್ಕೆ ಆದಷ್ಟು ಬೇಗನೆ ಒಳ್ಳೆಯ ಹೆಜ್ಜೆಯನ್ನು ಇಡಬೇಕು ಎಂದರು.
ನಾವು ಎಲ್ಲಾ ಪಕ್ಷದವರು ಒಂದಾಗಿ ಅಧಿವೇಶನ ಕರೆಯಬೇಕು ಎಂದು ಹೇಳಿದ್ದೇವೆ. ಪ್ರಧಾನ ಮಂತ್ರಿಗಳು ಅಧಿವೇಶನದಲ್ಲಿ ಇರಬೇಕು. ಪ್ರಧಾನಮಂತ್ರಿಗಳು ಯಾವೆಲ್ಲ ಕ್ರಮ ತೆಗೆದುಕೊಂಡಿದ್ದಾರೆ ಅದನ್ನು ಹೇಳಬೇಕು. ಕೆಲವೊಂದು ಗುಪ್ತ ಕಾರ್ಯಸೂಚಿಗಳಿರುತ್ತದೆ, ಅದನ್ನು ಮಾಡಲಿ. ಇವತ್ತಿನ ಪರಿಸ್ಥಿತಿ ಏನಿದೆ, ಅವರು ಏನು ಮಾಡಬೇಕು ಎಂಬುದು ಮನಸ್ಸಿನಲ್ಲಿದೆ. ಅದನ್ನು ಫ್ಲೋರ್ ಲೀಡರ್ಸ್ನ ಕರೆದು ಮಾತನಾಡಿಸುವುದು ಒಳ್ಳೆಯದು ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






